ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು..!

ಚಿಕ್ಕಮಗಳೂರು: ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಉರುಳಿಬಿದ್ದ ಪರಿಣಾಮ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಬಳಿ ನಡೆದಿದೆ. ಕ್ವಾಲೀಸ್ ಕಾರು ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿತ್ತು. ಬೆಳಗ್ಗೆಯಿಂದ ಈ ಭಾಗದಲ್ಲಿ ಅಬ್ಬರದ ಮಳೆಯಾಗುತ್ತಿರುವುದರಿಂದ ಜಾವಳಿ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಒಮ್ಮೆಲೆ ಹರಿಯುವ ನೀರಿನ ಹಳ್ಳಕ್ಕೆ ಬಿದ್ದಿದೆ. ಅದೃಷ್ಟವಶಾತ್​ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್​ ಆಗಿದ್ದಾರೆ. ಇದನ್ನೂ ಓದಿ: ಪಾಕ್​ ಗಡಿಯಿಂದ ಭಾರತಕ್ಕೆ ನುಸುಳಿತು ಡ್ರಗ್ಸ್​! ವಶಕ್ಕೆ ಪಡೆದ … Continue reading ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು..!