blank

ಜೂ.19ರವರೆಗೆ ಭಾರಿ ಮಳೆ! ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ Rain

blank
blank

Rain: ರಾಜ್ಯದಲ್ಲಿ ಮಳೆಯಾರ್ಭಟ ಮುಂದುವರೆದಿದ್ದು,  ಜೂನ್ 19ರವರೆಗೆ ಮುಂದುವರೆಯಲಿದೆ.  ಕರಾವಳಿ ಭಾಗದಲ್ಲಿ ವರುಣ ಅಬ್ಬರ ಜೋರಾಗಿದೆ. ಹೀಗಾಗಿ, ಮುಂಜಾಗ್ರತೆ ದೃಷ್ಟಿಯಿಂದ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು,ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್​ಆರ್​​​ ಪುರ ತಾಲೂಕಿನಲ್ಲಿ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸುತ್ತೋಲೆ ಹೊರಡಿಸಿದ್ದಾರೆ.

ಶಕ್ತಿನಗರ, ಮಂಗಳೂರು, ಕೊಟ್ಟಿಗೆಹಾರ, ಬಂಟವಾಳ, ಬೆಳ್ತಂಗಡಿ, ಮೂಡುಬಿದಿರೆ, ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು,ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ವಿಜಯನಗರ, ತುಮಕೂರು, ಶಿವಮೊಗ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉಪ್ಪಿನಂಗಡಿ, ಮಾಣಿ, ಕ್ಯಾಸಲ್​ರಾಕ್, ಮಂಕಿ, ಕದ್ರಾ, ಧರ್ಮಸ್ಥಳ, ಅಂಕೋಲಾ, ಸುಳ್ಯ, ಉಡುಪಿ, ಕಾರ್ಕಳ, ಪುತ್ತೂರು, ಲೋಂಡಾ,ಆಗುಂಬೆಯಲ್ಲಿ ಮಳೆಯಾಗಿದೆ.  ಗೇರುಸೊಪ್ಪ, ಮುಲ್ಕಿ, ಕುಂದಾಪುರ, ಕೋಟಾ, ಕಾರವಾರ, ಹೊನ್ನಾವರ, ಶೃಂಗೇರಿ, ನಾಪೋಕ್ಲು, ಸೋಮವಾರಪೇಟೆ, ಕುಮಟಾ, ಬೆಳಗಾವಿ, ಕಳಸ, ಖಾನಾಪುರ, ಕಿತ್ತೂರು,ಕೊಪ್ಪ, ಜಯಪುರ, ಹಳಿಯಾಳ, ಕಮ್ಮರಡಿ, ಪೊನ್ನಂಪೇಟೆ, ಬೇಲೂರು, ಹೊಸಕೋಟೆ, ಜೇವರಗಿ, ಹಾರಂಗಿ, ಸಂಕೇಶ್ವರ, ಹುಕ್ಕೇರಿ, ವಿಜಯಪುರ, ಬೈಲಹೊಂಗಲ, ಬಬಲೇಶ್ವರದಲ್ಲಿ ಮಳೆಯಾಗಿದೆ.

 

TAGGED:
Share This Article

ತಂದೆಯ ಈ ಒಂದು ಅಭ್ಯಾಸದಿಂದ ಅಂಜುಬುರಕ ಮಗುವಿಗೆ ಜನ್ಮ ನೀಡಬಹುದು! | Habit

Habit: ಸಾಮಾನ್ಯವಾಗಿ ಗರ್ಭಾವಸ್ಥೆಯಲ್ಲಿ, ಮಹಿಳೆ ತನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮಾತ್ರವಲ್ಲ, ಒತ್ತಡಕ್ಕೂ ಒಳಗಾಗಬಾರದು.…

ಸೊಂಟನೋವು, ಬೆನ್ನುನೋವಿನ ನಿಯಂತ್ರಣಕ್ಕೆ ಶಲಭಾಸನ

ಆಧುನಿಕ ಜೀವನ ಶೈಲಿಯ ವಿಧಾನದಲ್ಲಿ ಬರುವ ಸೊಂಟ ನೋವು, ಬೆನ್ನುನೋವಿನ ನಿಯಂತ್ರಣಕ್ಕೆ ಯೋಗಾಸನಗಳು ಸಹಕಾರಿಯಾಗುತ್ತವೆ. ಶಲಭಾಸನ,…