More

    ಹೆಬ್ಬಾಳ್ಕರ್ ಭರ್ಜರಿ ಪ್ರಚಾರ

    ಬೆಳಗಾವಿ: ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರದ ಅಂತಿಮ ದಿನವಾದ ಸೋಮವಾರ ಸುಳೇಬಾವಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಪ್ರಚಾರ ನಡೆಸಿದರು.

    ಆದಿಶಕ್ತಿ ಸುಳೇಬಾವಿಯ ಮಹಾಲಕ್ಷ್ಮೀ ದೇವಿಗೆ ಪೂಜೆ ಸಲ್ಲಿಸುವುದರೊಂದಿಗೆ ಪ್ರಚಾರ ಆರಂಭಿಸಿದ್ದ ಹೆಬ್ಬಾಳ್ಕರ್, ಅದೇ ಸ್ಥಳದಲ್ಲಿ ಶ್ರೀ ಮಹಾಲಕ್ಷ್ಮೀ ದೇವಿ ಆಶೀರ್ವಾದದೊಂದಿಗೆ ಕೊನೆಯ ಬಹಿರಂಗ ಪ್ರಚಾರ ಕೂಡ ಕೈಗೊಂಡರು. ಜನಸ್ತೋಮದ ಮಧ್ಯೆ ಸುಳೇಬಾವಿಯ ಗಲ್ಲಿ ಗಲ್ಲಿಗಳಲ್ಲಿ ರೋಡ್ ಶೋ ನಡೆಸಿದರು. ದೊಡ್ಡ ಪ್ರಮಾಣದಲ್ಲಿ ಬೆಂಬಲ ನೀಡಿದ ಜನರಿಗೆ ಧನ್ಯವಾದ ತಿಳಿಸಿದರು.

    ನಾನು ಏನೇ ಕೆಲಸ ಮಾಡುವುದಿದ್ದರೂ ಮೊದಲು ಸುಳೇಬಾವಿಯ ಮಹಾಲಕ್ಷ್ಮೀ ಆಶೀರ್ವಾದ ಪಡೆದೇ ಮಾಡುತ್ತೇನೆ. ದೇವಿ ಆಶೀರ್ವಾದ ಸದಾ ನನ್ನ ಮೇಲಿರುತ್ತದೆ. ಹಾಗೆಯೇ ಸುಳೇಬಾವಿಯ ಜನರೂ ಸಹ ಎಂದೂ ನನ್ನ ಕೈ ಬಿಡುವುದಿಲ್ಲ. ಅದಕ್ಕೆ ಸಾಕ್ಷಿ ಎನ್ನುವಂತೆ ಇಲ್ಲಿ ಜನರು ಸೇರಿದ್ದೀರಿ. ನಾನು ಕಳೆದ 5 ವರ್ಷದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ಯಶಸ್ವಿಯಾಗಿ ಕೆಲಸ ಮಾಡಲು ಸಾಧ್ಯವಾಯಿತು. ಮತ್ತೆ 5 ವರ್ಷ ನಿಮ್ಮೆಲ್ಲರ ಸೇವೆ ಮಾಡಲು ಅವಕಾಶ ಮಾಡಿಕೊಡಿ. ದಯವಿಟ್ಟು ಈ ಚುನಾವಣೆಯಲ್ಲಿ ಇವಿಎಂ ಯಂತ್ರದಲ್ಲಿ ನನ್ನ ಕ್ರಮ ಸಂಖ್ಯೆ 4, ಹಸ್ತದ ಗುರುತಿಗೆ ತಾವೆಲ್ಲರೂ ಮತಗಳನ್ನು ನೀಡಿ ಹರಿಸಿ, ಆಶೀರ್ವದಿಸಬೇಕು ಎಂದು ವಿನಂತಿಸಿದರು.

    ನಾನು ಕಳೆದ ಸುಮಾರು ಒಂದು ತಿಂಗಳು ಕ್ಷೇತ್ರವನ್ನೆಲ್ಲ ಸುತ್ತಾಡಿದಾಗ ಸೇರುತ್ತಿರುವ ಜನರು, ಅವರ ಬೆಂಬಲ ನೋಡಿದರೆ ನನಗೆ ಪ್ರತಿಸ್ಪರ್ಧಿಯೇ ಇಲ್ಲವೇನೋ ಎನ್ನುವ ಭಾವನೆ ಮೂಡಿದೆ. ಪಕ್ಷಾತೀತವಾಗಿ ಕ್ಷೇತ್ರದ ಜನರು ನನ್ನೊಂದಿಗೆ ನಿಂತಿದ್ದಾರೆ. ಎಲ್ಲರ ಬೆಂಬಲದೊಂದಿಗೆ ಮತ್ತೊಮ್ಮೆ ಆಯ್ಕೆಯಾಗಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ದಿನಗಳಲ್ಲಿ ಇನ್ನಷ್ಟು ಬೃಹತ್ ಯೋಜನೆಗಳನ್ನು ಕ್ಷೇತ್ರಕ್ಕೆ ತರುತ್ತೇನೆ ಎಂದು ಭರವಸೆ ನೀಡಿದರು.

    ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವಸದಸ್ಯರು, ಸರ್ವ ಸಮುದಾಯದ ಮುಖಂಡರು, ಗ್ರಾಮದ ಜನರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts