ಹಲಗೂರು: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿರಬೇಕು. ಅಮೂಲ್ಯ ಪ್ರಾಣ ರಕ್ಷಣೆಗೆ ಹೆಲ್ಮೆಟ್ ಉಪಯುಕ್ತವಾಗಿದೆ ಎಂದು ಹಲಗೂರು ಸಬ್ ಇನ್ಸ್ಪೆಕ್ಟರ್ ಬಿ.ಮಹೇಂದ್ರ ಹೇಳಿದರು.
ಇಲ್ಲಿನ ಹಲಗೂರು ವೃತದಲ್ಲಿ ಗುರುವಾರ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ಹಾಗೂ ಧರಿಸದಿದ್ದರೆ ಆಗುವ ಅನಾಹುತದ ಬಗ್ಗೆ ಮಾಹಿತಿ ನೀಡಿ ಮಾತನಾಡಿ, ವಾಹನದಲ್ಲಿ ಸಂಚಾರ ಮಾಡುವಾಗ ಮಕ್ಕಳನ್ನು ಕೂರಿಸಿಕೊಂಡಿದ್ದರೆ ಅವರಿಗೂ ಸಹ ಹೆಲ್ಮೆಟ್ ಧರಿಸುವ ಕಾನೂನು ಇದೆ ಎಂದರು.