ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್ ಮತ್ತು ವಿಜಯಪುರದಲ್ಲಿ ಏ.16ರಿಂದ ಏ.20ರವರೆಗೆ, ಧಾರವಾಡ ಮತ್ತು ಕಲಬುರಗಿಯಲ್ಲಿ ಮುಂದಿನ 24 ಗಂಟೆ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಭೀಕರ ಅಪಘಾತ: ಸತ್ತವರ ಸಂಖ್ಯೆ ಐದಕ್ಕೇರಿಕೆ; ಇಬ್ಬರು ಗಂಡ-ಹೆಂಡಿರ ಜತೆಗೆ ಒಂದು ಮಗು ಕೂಡ ಸಾವು
ಒಂದೆರೆಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚು ಕಾಣಿಸಿಕೊಳ್ಳಲಿದೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಒಣ ಹವೆ ಮುಂದುವರಿಯಲಿದ್ದು, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಏ.18ರಿಂದ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಸಿದ್ದರಾಮಯ್ಯಗೆ ವಾಯುಯಾನ ಕಂಟಕ?; ನಿನ್ನೆ ವಿಮಾನ, ಇಂದು ಹೆಲಿಕಾಪ್ಟರ್ ಪ್ರಯಾಣದಲ್ಲಿ ಸಮಸ್ಯೆ!
ರಾಜ್ಯದ ಕಲವೆಡೆ ವಾಡಿಕೆಗಿಂತ ಸರಾಸರಿ ಎರಡು ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆಯಾಗಲಿದೆ. ಶನಿವಾರ ಕಲಬುರಗಿ 40.9, ರಾಯಚೂರು 40, ಬಳ್ಳಾರಿಯಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
2023ರ ಅಂತಿಮ ಮತದಾರರ ಪಟ್ಟಿ: ಇಲ್ಲಿದೆ ಜಿಲ್ಲಾವಾರು, ಕ್ಷೇತ್ರವಾರು ವಿವರ