ಹಿರಿಯೂರು: ಇತಿಹಾಸ ಪ್ರಸಿದ್ಧ ಶ್ರೀ ತೇರುಮಲ್ಲೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಮಾಘ ಶುದ್ಧ ಪಾಡ್ಯಮಿ ಸೋಮವಾರ ಬೆಳಗ್ಗೆ 9 ಗಂಟೆಗೆ ದೇವಸ್ಥಾನದಲ್ಲಿರುವ ಶಿವಧನಸನ್ನು ವೇದಾವತಿ ನದಿಗೆ ಕೊಂಡೊಯ್ದು ಗಂಗಾ ಪೂಜೆ ನೆರವೇರಿಸಲಾಯಿತು. ಬಳಿ ಏಕ ಕಾಲದಲ್ಲಿ ಮೂರು ರಥಗಳನ್ನು ಭಕ್ತರು ಎಳೆದು ಭಕ್ತಿ ಸಮರ್ಪಿಸಿದರು.
ವಿವಿಧ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಹಾಗೂ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.