More

    ನಾಗಲಾಪುರ ವೀರಸಿಂಹಾಸನ ಸಂಸ್ಥಾನ ಮಠದ ಅಭಿವೃದ್ಧಿಗೆ ಸಹಕರಿಸಿ : ಭಕ್ತರಲ್ಲಿ ಶಾಸಕ ಶ್ರೀನಿವಾಸಗೌಡ ಮನವಿ

    ಕೋಲಾರ : ತಾಲೂಕಿನ ಶ್ರೀಮದ್ ನಾಗಲಾಪುರ ವೀರಸಿಂಹಾಸನ ಸಂಸ್ಥಾನ ಮಠದ ಅಭಿವೃದ್ಧಿಗೆ ಭಕ್ತರು ಸಹಕಾರ ನೀಡಬೇಕು ಎಂದು ಶಾಸಕ ಕೆ.ಶ್ರೀನಿವಾಸಗೌಡ ಮನವಿ ಮಾಡಿದರು.

    ಮಠದ ಆವರಣದಲ್ಲಿ ಲೋಕಕಲ್ಯಾಣಾರ್ಥವಾಗಿ ಸೋಮವಾರ ಹಮ್ಮಿಕೊಂಡಿದ್ದ ಶಿವ ಪಾರ್ವತಿ ಕಲ್ಯಣೋತ್ಸವ, ಲಿಂಗೈಕ್ಯ ಶ್ರೀ ಗುರಲಿಂಗರಾಜ ಶಿವಾಚಾರ್ಯ ಸ್ವಾಮೀಜಿಗಳ 18ನೇ ವರ್ಷದ ಸಂಸ್ಮರಣೋತ್ಸವ ಹಾಗೂ ಕರೊನಾ ವಾರಿಯರ್ಸ್ ಮತ್ತು ಸಮಾಜ ಸೇವಕರಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ದಾಸೋಹ ಭವನ ಮತ್ತು ಅತಿಥಿ ಭವನ ನಿರ್ಮಾಣಕ್ಕೆ ಜನ ಕೈಲಾದ ನೆರವು ನೀಡುವ ಮೂಲಕ ಮಠದ ಎಲ್ಲ ಅಭಿವೃದ್ಧಿ ಕೆಲಸಗಳಿಗೆ ಸಹಕರಿಸಬೇಕು ಎಂದರು.

    ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗನಾಳ ಸೋಮಣ್ಣ ಮಾತನಾಡಿ, ಮಠದ ಮೇಲೆ ಜನ ಅಪಾರ ನಂಬಿಕೆ ಇಟ್ಟಿದ್ದಾರೆ. ಅದರಂತೆ ಮಠವೂ ಜನಪರ ಹಾಗೂ ಧಾರ್ಮಿಕ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಿದೆ. ಜಿಲ್ಲೆಯವರ ಹಾಗೂ ಹೊರಗಿನ ಜಿಲ್ಲೆಯ ಜನರ ಸಹಕಾರ ಪಡೆದು ಅಭಿವೃದ್ಧಿ ಕೆಲಸ ಮಾಡೋಣ ಎಂದರು.

    ನಾಗಲಾಪುರ ಸಂಸ್ಥಾನ ಮಠದ ಮಠಾಧ್ಯಕ್ಷ ಶ್ರೀಪಟ್ಟದ ತೇಜೇಶಲಿಂಗ ಶಿವಾಜಾರ್ಯ ಸ್ವಾಮೀಜಿ, ಬಾಳೆಹೊನ್ನೂರು ಶಾಖಮಠ ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಜಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಮಠದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಆಗಬೇಕು. ಅವುಗಳಿಗೆ ಭಕ್ತರ ಸಹಕಾರ ಅಗತ್ಯವಾಗಿದೆ ಎಂದರು.

    35 ಜನ ಇಷ್ಟಲಿಂಗ ದೀಕ್ಷೆ ಪಡೆದರು. ಸ್ಥಳದಲ್ಲಿದ್ದ ಹಲವಾರು ದಾನಿಗಳು ಮಠದ ಅಭಿವೃದ್ಧಿಗೆ ಧನ ಸಹಾಯ, ಕಂಬಿ ಹಾಗೂ ಚೇರ್ ನೀಡಿದರು. ಮುಖಂಡರಾದ ಸಿ.ಎಂ.ಆರ್.ಶ್ರೀನಾಥ್, ಸಿ.ನಂಜುಂಡಪ್ಪ, ಚಂದ್ರಶೇಖರ್, ಸುಕುಮಾರ್, ಸೋಮಣ್ಣ, ವಿ.ಸಿ.ಒಡೆಯರ್, ನಂದೀಶ್, ಬಸವರಾಜ್, ಡಾ.ಸಿ.ಕೆ.ಶಿವಣ್ಣ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts