More

    ಚಂಡಮಾರುತ ಇಫೆಕ್ಟ್​, ಮೂರು ಜಿಲ್ಲೆಗಳಲ್ಲಿ ಹೈ ಅಲರ್ಟ್​: ನಾಳೆಯೂ ಕರಾವಳಿಯಲ್ಲಿ ಭಾರಿ ಮಳೆ…

    ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತ ಪ್ರಭಾವದಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಶನಿವಾರ ಭಾರಿ ಮಳೆ ಸುರಿದಿದೆ. ಮಂಗಳೂರಿನಲ್ಲಿ ಅತಿ ಹೆಚ್ಚು 80 ಮಿಲಿಮೀಟರ್​ ಮಳೆಯಾಗಿದೆ. ಸಮುದ್ರದಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ದೈತ್ಯ ಅಲೆಗಳು ತೀರಕ್ಕೆ ಬಂದು ಅಪ್ಪಳಿಸುತ್ತಿವೆ. ಇದರಿಂದ ತಡೆಗೋಡೆಗಳಿಗೆ ಹಾನಿಯಾಗಿದೆ. ತೀರಕ್ಕೆ ಹಾಕಲಾಗಿದ್ದ ದೈತ್ಯ ಕಲ್ಲುಗಳು ಸಮುದ್ರ ಪಾಲಾಗಿವೆ. ತೀರದಲ್ಲಿದ್ದ ನೂರಾರು ಮರಗಳು ಸಮುದ್ರ ಪಾಲಾಗಿವೆ.

    ಕರಾವಳಿಯಲ್ಲಿ ರೆಡ್​ ಅಲರ್ಟ್​​: ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮೇ 16ರಂದು ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್​ ಅಲರ್ಟ್​​ ಘೋಷಿಸಲಾಗಿದೆ. ಅಲ್ಲದೆ ಈ ಭಾಗಗಳಲ್ಲಿ ಮೇ 17ರಂದು ಆರೆಂಜ್​, 18, 19ರಂದು ಯೆಲ್ಲೋ ಅಲರ್ಟ್​​ ಇರಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

    ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮುಂದಿನ 48 ಗಂಟೆ ಆರೆಂಜ್​ ಅಲರ್ಟ್​​ ಇರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಸೇರಿ ಇನ್ನಿತರ ಜಿಲ್ಲೆಗಳಲ್ಲಿ ಮುಂದಿನ 4 ದಿನ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಈಗಾಗಲೆ, ತೌಕ್ತೆ ಚಂಡಮಾರುತ ಮತ್ತಷ್ಟು ತೀವ್ರಗೊಂಡಿದ್ದು, ಗುಜರಾತ್​ ಕರಾವಳಿಯತ್ತ ಸಾಗುತ್ತಿದೆ.

    ಆಚೆಗೆ ಬರೋಕಾಗಲ್ಲ ಅಂದ್ಕೋಬೇಡಿ, ಬಂದೇ ಬರ್ತೀವಿ.. ಮನಸಿದ್ದರೆ ಮಾರ್ಗ: ನೀನಾಸಂ ಸತೀಶ್

    ರೈತರೇ ಲಾಕ್​ಡೌನ್​ ಚಿಂತೆ ಬಿಡಿ, ನಿಮ್ಮ ಬೆಳೆಗೆ ಸೂಕ್ತ ಬೆಲೆಕೊಟ್ಟು ಖರೀದಿಸುವೆ, ಈ ನಂಬರ್​ಗೆ ಕರೆ ಮಾಡಿ: ನಟ ಉಪೇಂದ್ರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts