ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತ ಪ್ರಭಾವದಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಶನಿವಾರ ಭಾರಿ ಮಳೆ ಸುರಿದಿದೆ. ಮಂಗಳೂರಿನಲ್ಲಿ ಅತಿ ಹೆಚ್ಚು 80 ಮಿಲಿಮೀಟರ್ ಮಳೆಯಾಗಿದೆ. ಸಮುದ್ರದಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ದೈತ್ಯ ಅಲೆಗಳು ತೀರಕ್ಕೆ ಬಂದು ಅಪ್ಪಳಿಸುತ್ತಿವೆ. ಇದರಿಂದ ತಡೆಗೋಡೆಗಳಿಗೆ ಹಾನಿಯಾಗಿದೆ. ತೀರಕ್ಕೆ ಹಾಕಲಾಗಿದ್ದ ದೈತ್ಯ ಕಲ್ಲುಗಳು ಸಮುದ್ರ ಪಾಲಾಗಿವೆ. ತೀರದಲ್ಲಿದ್ದ ನೂರಾರು ಮರಗಳು ಸಮುದ್ರ ಪಾಲಾಗಿವೆ.
ಕರಾವಳಿಯಲ್ಲಿ ರೆಡ್ ಅಲರ್ಟ್: ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮೇ 16ರಂದು ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಈ ಭಾಗಗಳಲ್ಲಿ ಮೇ 17ರಂದು ಆರೆಂಜ್, 18, 19ರಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮುಂದಿನ 48 ಗಂಟೆ ಆರೆಂಜ್ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಸೇರಿ ಇನ್ನಿತರ ಜಿಲ್ಲೆಗಳಲ್ಲಿ ಮುಂದಿನ 4 ದಿನ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಈಗಾಗಲೆ, ತೌಕ್ತೆ ಚಂಡಮಾರುತ ಮತ್ತಷ್ಟು ತೀವ್ರಗೊಂಡಿದ್ದು, ಗುಜರಾತ್ ಕರಾವಳಿಯತ್ತ ಸಾಗುತ್ತಿದೆ.
ಆಚೆಗೆ ಬರೋಕಾಗಲ್ಲ ಅಂದ್ಕೋಬೇಡಿ, ಬಂದೇ ಬರ್ತೀವಿ.. ಮನಸಿದ್ದರೆ ಮಾರ್ಗ: ನೀನಾಸಂ ಸತೀಶ್