More

    ಹೈಕಮಾಂಡ್ ತೀರ್ಮಾನವೇ ಅಂತಿಮ

    ಬೆಳಗಾವಿ: ರಾಜ್ಯಸಭೆ ಚುನಾವಣೆ ಟಿಕೆಟ್‌ಗೆಹೆಚ್ಚಿನ ಆಕಾಂಕ್ಷಿಗಳು ಇರುವುದು ಸಹಜ. ಹೈಕಮಾಂಡ್ ಈ ವಿಚಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರ ರೊಂದಿಗೆ ಮಾತನಾಡಿ, ಪ್ರತಿಯೊಬ್ಬರಿಗೂ ಟಿಕೆಟ್ ಕೇಳುವ ಹಕ್ಕಿದೆ. ನಾನೂ ಟಿಕೆಟ್ ಕೇಳುತ್ತೇನೆ. ಕತ್ತಿ ಸಹೋದರರು ಕೇಳುತ್ತಾರೆ. ಜತೆಗಿದ್ದವರು ಕೇಳಿದರೆ ತಪ್ಪೇನಿಲ್ಲ. ಯಾರಿಗೆ ಟಿಕೆಟ್ ನೀಡಬೇಕು ಎಂಬುವುದನ್ನು ವರಿಷ್ಠರೇ ತೀರ್ಮಾನಿಸುತ್ತಾರೆ. ಈ ಹಿಂದೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಟಿಕೆಟ್ ಕೇಳಿದ್ದೆ. ಆದರೆ, ಪಕ್ಷದ ನಾಯಕರು ರಾಜ್ಯಸಭೆಗೆ ಟಿಕೆಟ್ ಕೊಟ್ಟರು. ಟಿಕೆಟ್ ನೀಡುವುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಸ್ಪಷ್ಟಪಡಿಸಿದರು.

    ಬಿಎಸ್‌ವೈ ನಮ್ಮ ಸಿಎಂ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೋರೆ, ಒಬ್ಬರಿಂದ ನಾಯಕತ್ವ ಬದಲಾವಣೆ ಸಾಧ್ಯವಿಲ್ಲ. ನಮ್ಮ ಭಾಗದ ಶಾಸಕರು ಕತ್ತಿ ಅವರ ಮನೆಗೆ ಊಟಕ್ಕೆ ಹೋಗಿದ್ದರು. ಆದರೆ, ಅದು ಭಿನ್ನಮತವಲ್ಲ. ಬಿಎಸ್‌ವೈ ನಮ್ಮ ಸಿಎಂ. 5 ವರ್ಷ ಯಶಸ್ವಿಯಾಗಿ ಸರ್ಕಾರ ನಡೆಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts