ಬೆಂಗಳೂರು: ಹಾಸನ ಸಂಸದ, ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಇದೀಗ ರಾಜ್ಯವ್ಯಾಪಿ ಮಾತ್ರವಲ್ಲದೇ ರಾಷ್ಟ್ರಮಟ್ಟಕ್ಕೂ ತಲುಪಿದೆ. ಪ್ರಜ್ವಲ್ಗೆ ಸಂಬಂಧಿಸಿದ ವಿಡಿಯೋವಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆದ ಹಿನ್ನೆಲೆ ಈಗ ವಿಡಿಯೋ ಪ್ರಕರಣ ದೇಶವ್ಯಾಪಿ ಭಾರೀ ಸಂಚಲನ ಹುಟ್ಟುಹಾಕಿದೆ. ಈ ವಿಷಯ ತೀವ್ರವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಭಾರೀ ಖಂಡನೆ ವ್ಯಕ್ತಪಡಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಬೆನ್ನಲ್ಲೇ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಇದೀಗ ಜೆಡಿಎಸ್, ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದೆ. ಈ ಬಗ್ಗೆ ಸ್ವತಃ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಹ ಸ್ಪಷ್ಟಪಡಿಸಿದ್ದಾರೆ. ಇನ್ನೂ ಈ ವಿಚಾರ ರಾಷ್ಟ್ರಮಟ್ಟಕ್ಕೂ ತಲುಪಿದ್ದು, ದೇಶವ್ಯಾಪಿ ಪ್ರಜ್ವಲ್ ರೇವಣ್ಣ ವಿರುದ್ಧ ಖಂಡನೆ ವ್ಯಕ್ತವಾಗುತ್ತಿದೆ.
ಈ ಪ್ರಕರಣದ ತನಿಖೆ ಆಗಬೇಕು ಎಂದು ನಿರ್ಧರಿಸಿದ ಸಿಎಂ ಸಿದ್ದರಾಮಯ್ಯ, ಈಗಾಗಲೇ ಎಸ್ಐಟಿ ತಂಡಕ್ಕೆ ತನಿಖೆಗೆ ಆದೇಶಿಸಿದ್ದಾರೆ. ಇದರ ಬೆನ್ನಲ್ಲೇ ವಿಶೇಷ ತನಿಖಾ ದಳ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಎಲ್ಲಾ ಆಯಾಮದಲ್ಲಿಯೂ ವಿಚಾರಣೆ ನಡೆಸಿ, ಹೆಚ್ಚಿನ ಮಾಹಿತಿ ಕಲೆಹಾಕುವಲ್ಲಿ ಮುಂದಾಗಿದೆ.
ಇಬ್ಬರ ಜೀವನದಲ್ಲಿ ಮಧ್ಯಪ್ರವೇಶಿಸುವ ಹಕ್ಕು ಯಾವನಿಗೂ ಇಲ್ಲ: ಸಿಡಿದೆದ್ದ ಗೌತಮ್ ಗಂಭೀರ್
ಡೆಲ್ಲಿ ವಿರುದ್ಧದ ಸೋಲಿಗೆ ತಿಲಕ್ ವರ್ಮ ಕಾರಣ ಎಂದ ಹಾರ್ದಿಕ್ ಪಾಂಡ್ಯ! ನೀನೆಂಥ ಕ್ಯಾಪ್ಟನ್? ಫ್ಯಾನ್ಸ್ ಕಿಡಿ