More

    ರೈತನ ಏಕಾಂಗಿ ಹೋರಾಟಕ್ಕೆ ಸಾಥ್ ಸಂಘಟನೆ

    ಮಂಡ್ಯ: ತಾಲೂಕಿನ ಹಲ್ಲೇಗೆರೆ ಗ್ರಾಮದಲ್ಲಿ ಮಂಡ್ಯದಿಂದ-ಬೀರಗೋನಹಳ್ಳಿ ಹಳ್ಳಿಯವರೆಗೆ ರಾಜ್ಯ ಹೆದ್ದಾರಿ ಕಾಮಗಾರಿಯ ಗೊಂದಲವನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಆರು ದಿನಗಳಿಂದ ಏಕಾಂಗಿ ಪ್ರತಿಭಟನೆ ನಡೆಸುತ್ತಿರುವ ಪ್ರೊ.ಎಂ.ಡಿ.ನಂಜುಂಡಸ್ವಾಮಿ ವಿಚಾರ ವೇದಿಕೆ ಸಂಚಾಲಕ ಎಚ್.ಸಿ.ಶಿವರಾಮು ಅವರಿಗೆ ಶುಕ್ರವಾರ ರೈತ ಸಂಘದ ಪದಾಧಿಕಾರಿಗಳು ಸಾಥ್ ನೀಡಿದರು.
    ಸುನಂದಾ ಜಯರಾಂ ಮಾತನಾಡಿ, ಶಿವರಾಮ್ ಅವರಿಗೆ ಸೇರಿದ ಜಾಗವನ್ನು ಸರ್ಕಾರಿ ರಸ್ತೆಯನ್ನಾಗಿ ಮಾಡಿಬಿಟ್ಟಿದ್ದಾರೆ .ಅಂತೆಯೇ ಈಗಲೂ ಅವರ ಸ್ವತ್ತಿನಲ್ಲಿ ಪ್ರಸ್ತುತ ವಾಹನ ಸಂಚಾರ ನಡೆಯುತ್ತಿದೆ. ಸರ್ಕಾರಕ್ಕೆ ಸೇರಿದ ಜಾಗವಿದ್ದರೂ ಹಲವು ವರ್ಷಗಳಿಂದ ರಸ್ತೆ ನಿರ್ಮಾಣ ಮಾಡುತ್ತಿಲ್ಲ.ಈ ಸಮಸ್ಯೆಯನ್ನು ಸರಿಪಡಿಸುವಂತೆ ಹಲವು ಬಾರಿ ಅಧಿಕಾರಿಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.
    ಪ್ರತಿಭಟನೆಯಲ್ಲಿ ಉಪವಾಸ ಸತ್ಯಾಗ್ರಹ ನಿರತ ಎಚ್.ಸಿ  ಶಿವರಾಮು ರೈತ ಸಂಘದ ಪದಾಧಿಕಾರಿಗಳಾದ ಇಂಡುವಾಳು ಚಂದ್ರಶೇಖರ್ ಮುದ್ದೇಗೌಡ ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts