ನಂಜನಗೂಡಿನಲ್ಲಿ ಹೆದ್ದಾರಿ ಸಂಚಾರ ತಡೆ

blank

ನಂಜನಗೂಡು: ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅಮಿತ್ ಷಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸಿ, ದೇಶದಿಂದಲೇ ಗಡಿಪಾರು ಮಾಡುವಂತೆ ಆಗ್ರಹಿಸಿ ನಂಜನಗೂಡು ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಹುಲ್ಲಹಳ್ಳಿ ವೃತ್ತದ ಬಳಿ ಶನಿವಾರ ಜಮಾವಣೆಗೊಂಡ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು, ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಸಂಚಾರವನ್ನು ತಡೆದು, ಮಾನವ ಸರಪಳಿ ನಿರ್ಮಿಸಿ, ಅಮಿತ್ ಷಾ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಒಂದು ಗಂಟೆಗಳಿಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿ ಸಂಚಾರವನ್ನು ತಡೆದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು ಸಾರ್ವಜನಿಕರು ಪರದಾಡುವಂತಾಯಿತು. ವಿವಿಧ ಸಂಘಟನೆಗಳ ಮುಖಂಡರಾದ ನಗರ್ಲೆ ಎಂ ವಿಜಯಕುಮಾರ್, ವಿದ್ಯಾಸಾಗರ್, ಬೊಕ್ಕಳ್ಳಿ ನಂಜುಂಡಸ್ವಾಮಿ, ಅಭಿ ನಾಗಭೂಷಣ್, ಮಲ್ಲೇಶ್, ನಾರಾಯಣ್, ಕಾರ್ಯ ಬಸವಣ್ಣ, ಜಯಶಂಕರ್, ಕುಮಾರ್ ಇತರರು ಇದ್ದರು.

Share This Article

ಚುಮು ಚುಮು ಚಳಿಗೆ ಮನೆಯಲ್ಲೇ ಮಾಡಿ Ragi ಪಕೋಡ; ನಾಲಿಗೆಗೂ ರುಚಿಕರ ಆರೋಗ್ಯಕ್ಕೂ ಒಳ್ಳೆಯದು

ಬೆಂಗಳೂರು: ಪ್ರಸ್ತುತ ಜೀವನಶೈಲಿಯನ್ನು ನೋಡುವುದಾದರೆ ಜನರು ತಾವು ಸೇವಿಸುವ ಆಹಾರದಿಂದಲೇ ಅನಾರೋಗ್ಯಕ್ಕೀಡಾಗುತ್ತಿರುವುದು ನಿಜಕ್ಕೂ ಕಳವಳಕಾರಿಯಾಗಿದೆ. ಇಂತಹ…

valentines day: ಪ್ರೇಮಿಗಳ ದಿನದಂದು ನಿಮ್ಮ ಮುಖ ಲಕ-ಲಕ ಹೊಳೆಯಲು ಒಮ್ಮೆ ಟ್ರೈ ಮಾಡಿ..

valentines day : ಪ್ರೇಮಿಗಳ ದಿನದಂದು, ಬಹುತೇಕ ಎಲ್ಲಾ ಹುಡುಗಿಯರು ತಮ್ಮ ಸಂಗಾತಿಯ ಮುಂದೆ ಅತ್ಯಂತ…

ಟೇಸ್ಟಿ ಹೆಸರುಕಾಳಿನ ಕಬಾಬ್​ ಮಾಡಲು 15-20 ನಿಮಿಷ ಸಾಕು; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ವಾರಾಂತ್ಯದಲ್ಲಿ ಏನಾದರೂ ವಿಶೇಷವಾಗಿ ತಿಂಡಿ ತಯಾರಿಸಬೇಕು ಆದರೆ ಏನು ಮಾಡೋದು.. ಅತಿಥಿಗಳು ಬಂದಾಗ ಥಟ್​ ಅಂಥಾ…