ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕುತೂಹಲ ಕೆರಳಿಸಿದ್ದ ಹಿಜಾಬ್ ವಿವಾದ ಕುರಿತ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿ ಇಂದಿಗೆ ಹನ್ನೊಂದು ದಿನಗಳಾಗಿದ್ದು, ಇವತ್ತು ವಿಚಾರಣೆ ಮುಗಿದಿದೆ. ಇಂದು ವಿಚಾರಣೆ ಪೂರ್ಣಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದ್ದು, ನಿರೀಕ್ಷೆಯಂತೆಯೇ ವಿಚಾರಣೆ ಮುಕ್ತಾಯಗೊಂಡಿದೆ.
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ಸೇರಿ ಹಿಜಾಬ್ಗೆ ಸಂಬಂಧಿಸಿದಂತೆ ಸಲ್ಲಿಕೆ ಆಗಿರುವ ಎಲ್ಲ ಅರ್ಜಿಗಳ ವಿಚಾರಣೆ ಇಂದು ಪೂರ್ಣಗೊಂಡಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಎಸ್.ಕೃಷ್ಣ ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೆ.ಎಂ. ಖಾಜಿ ಅವರಿದ್ದ ತ್ರಿಸದಸ್ಯ ಪೀಠವು ವಾದ-ಪ್ರತಿವಾದಗಳನ್ನು ಆಲಿಸಿ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ. ತೀರ್ಪನ್ನು ಕಾಯ್ದಿರಿಸಿರುವ ಪೀಠ ಅಲ್ಲದೆ ಇನ್ನೇನಾದರೂ ಅಂಶಗಳಿದ್ದಲ್ಲಿ ಅದನ್ನು ಲಿಖಿತವಾಗಿ ಸಲ್ಲಿಸಲು ಅವಕಾಶ ನೀಡಿದೆ.
ಪೇದೆಯನ್ನು ನಂಬಿ ಗಂಡನ ಬಿಟ್ಟ ಮಹಿಳೆಯ ಬಾಳೇ ಈಗ ಗೋಳು: ಕಾನ್ಸ್ಟೆಬಲ್ ಕಿತಾಪತಿ ಒಂದೆರಡಲ್ಲ..