ಸಿಜೆ ನೇತೃತ್ವದ ಪೂರ್ಣ ಪೀಠಕ್ಕೆ ಹಿಜಾಬ್ ಪ್ರಕರಣ: ತ್ರಿಸದಸ್ಯ ಪೀಠ ರಚನೆ, ಇಂದಿನಿಂದಲೇ ವಿಚಾರಣೆ

ಬೆಂಗಳೂರು: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಹಿಜಾಬ್ ವಿವಾದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಪೀಠ ಬುಧವಾರ ಸಿಜೆ ಅಂಗಳಕ್ಕೆ ರವಾನಿಸಿದ ಬೆನ್ನಲ್ಲೇ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೂ ಸೇರಿ ಮೂವರು ನ್ಯಾಯ ಮೂರ್ತಿಗಳನ್ನೊಳಗೊಂಡ ಪೂರ್ಣಪೀಠ ರಚನೆ ಯಾಗಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಹಾಗೂ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರನ್ನೊಳಗೊಂಡ ಈ ಪೂರ್ಣಪೀಠ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆ ಯಾಗಿರುವ ಎಲ್ಲ ಅರ್ಜಿಗಳನ್ನೂ ಗುರುವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಉಡುಪಿ ಬಾಲಕಿಯರ ಸರ್ಕಾರಿ … Continue reading ಸಿಜೆ ನೇತೃತ್ವದ ಪೂರ್ಣ ಪೀಠಕ್ಕೆ ಹಿಜಾಬ್ ಪ್ರಕರಣ: ತ್ರಿಸದಸ್ಯ ಪೀಠ ರಚನೆ, ಇಂದಿನಿಂದಲೇ ವಿಚಾರಣೆ