ಶಿಮ್ಲಾ: ಆಡಳಿತಾರೂಢ ಬಿಜೆಪಿಯನ್ನು ಸೋಲಿಸಿದ ಹಿಮಾಚಲ ಪ್ರದೇಶದ ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆ ಎದ್ದಿತ್ತು. ಶುಕ್ರವಾರ ಸಂಜೆ ನಡೆದ ಶಾಸಕಾಂಗ ಸಭೆಯಲ್ಲೂ ಯಾವುದೇ ನಿರ್ಧಾರಕ್ಕೆ ಬರಲಾಗಲಿಲ್ಲ. ಈಗ ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ತೆಗೆದುಕೊಂಡಿದೆ.
ಸಿಎಂ ಹುದ್ದೆ ರೇಸಿನಲ್ಲಿ ಹಿಮಾಚಲದ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್, ಮಾಜಿ ಅಧ್ಯಕ್ಷ ಸುಖ್ ವಿಂದರ್ ಸಿಂಗ್ ಸುಖ ಮತ್ತು ವಿರೋಧ ಪಕ್ಷದ ನಾಯಕರಾಗಿದ್ದ ಮುಕೇಶ್ ಅಗ್ನಿಹೋತ್ರಿ ನಡುವೆ ತೀವ್ರ ಪೈಪೋಟಿ ಉಂಟಾಗಿತ್ತು.
ಈಗ ಹೈಕಮಾಂಡ್ ಒಂದು ನಿರ್ಧಾರಕ್ಕೆ ಬಂದಿದ್ದು, ಹಿಮಾಚಲದ ಮುಂದಿನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ರನ್ನು ಆಯ್ಕೆ ಮಾಡಿದೆ.
ಕಾಂಗ್ರೆಸ್ನ ಹಿಮಾಚಲ ಪ್ರದೇಶದ ಉಸ್ತುವಾರಿ ಸಚಿವ ರಾಜೀವ್ ಶುಕ್ಲಾ, ಛತ್ತೀಸ್ಗಢ ಮುಖ್ಯಮಂತ್ರಿ ಮತ್ತು ಭೂಪೇಶ್ ಬಾಘೇಲ್, ಹಿಮಾಚಲ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ವೀರಭದ್ರ ಸಿಂಗ್ ಮತ್ತು ಇತರ ಹಲವಾರು ಕಾಂಗ್ರೆಸ್ ನಾಯಕರು ಹೊಸ ನಾಯಕನ ಆಯ್ಕೆಯ ವಿಚಾವಾಗಿ ಶಿಮ್ಲಾದಲ್ಲಿದ್ದರು. ಸುಖ್ವಿಂದರ್ ಸಿಂಗ್ರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡಿದ್ದು ಮುಖೇಶ್ ಅಗ್ನಿಹೋತ್ರಿ ಉಪಮುಖ್ಯಮಂತ್ರಿಯಾಗಲಿದ್ದಾರೆ. ಎಂದು ಛತ್ತೀಸ್ಗಢ ಸಿಎಂ ಭೂಪೇಶ್ ಬಾಘೇಲ್ ಹೇಳಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನನ ಕಾರ್ಯಕ್ರಮ ನಡೆಯಲಿದ್ದು ಹೊಸ ಸರ್ಕಾರ ಬಬದಲಾವಣೆ ತರಲಿದೆ ಎಂದು ಛತ್ತೀಸ್ಗಢ ಮುಖ್ಯಮಂತ್ರಿ ಹೇಳಿದ್ದಾರೆ. (ಏಜೆನ್ಸೀಸ್)