More

    ಶಿರಸಿಯಲ್ಲಿ ಹಿಂದು ಕಾರ್ಯಕರ್ತರ ಪ್ರತಿಭಟನೆ

    ಶಿರಸಿ: ಹಿಂದು ಕಾರ್ಯಕರ್ತರನ್ನು ಬಂಧಿಸಿದ ಸರ್ಕಾರದ ನಡೆ ವಿರೋಧಿಸಿ, ‘ನಾನು ಹಿಂದು ಕಾರ್ಯಕರ್ತ ನನ್ನನ್ನು ಬಂಧಿಸಿ’ ಎಂದು ಹಿಂದು ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ 20ಕ್ಕೂ ಅಧಿಕ ಕಾರ್ಯಕರ್ತರು ಶಿರಸಿ ನಗರದ ಡಿವೈಎಸ್ಪಿ ಕಚೇರಿ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.

    ಅನಂತಮೂರ್ತಿ ಹೆಗಡೆ ಮಾತನಾಡಿ, ಕಳೆದ ಕೆಲವು ದಿನಗಳ ಹಿಂದೆ ಹಿಂದು ಕಾರ್ಯಕರ್ತ, ಕರಸೇವಕ ಶ್ರೀಕಾಂತ ಪೂಜಾರಿಯನ್ನು ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಏಕಾಏಕಿ ಬಂಧಿಸಿರುವುದು ಖಂಡನೀಯ. 30 ವರ್ಷಗಳ ಹಿಂದಿನ ಪ್ರಕರಣಗಳಲ್ಲಿ ಇದೀಗ ಅವರನ್ನು ಬಂಧಿಸಿರುವುದರ ಹಿಂದೆ ಕಾಣದ ಕೈಗಳ ರಾಜಕೀಯ ಎದ್ದು ಕಾಣುತ್ತದೆ. ಹಿಂದುಸ್ತಾನದಲ್ಲಿ ಹಿಂದು ಕಾರ್ಯಕರ್ತರಿಗೆ ಇಂತಹ ಸ್ಥಿತಿ ಬಂದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಶ್ರೀಕಾಂತ ಪೂಜಾರಿ ಮೇಲಿನ ಪ್ರಕರಣಗಳನ್ನು ಕೈ ಬಿಡಬೇಕು ಮತ್ತು ಸಮಸ್ತ ಹಿಂದುಗಳಿಗೆ ಸರ್ಕಾರ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

    ನಮ್ಮ ಹಿರಿಯರ ತ್ಯಾಗ, ಬಲಿದಾನ, 500 ವರ್ಷಗಳ ಹೋರಾಟದ ಫಲವಾಗಿ ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ವಣವಾಗಿದೆ. ಸ್ವಾಭಿಮಾನಿ ಹಿಂದುಗಳ ದಶಕಗಳ ಕನಸು ಇಂದು ನನಸಾಗಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ ಎಂದರು.

    ನಗರಸಭೆ ಮಾಜಿ ಅಧ್ಯಕ್ಷ ಗಣಪತಿ ನಾಯ್ಕ ಮಾತನಾಡಿ, ಅಯೋಧ್ಯೆ ಶ್ರೀರಾಮ ಮಂದಿರದ ಉದ್ಘಾಟನೆ ಜ. 22ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಿಂದು ಕಾರ್ಯಕರ್ತರು ಪ್ರತಿ ಮನೆಗೆ ತೆರಳಿ, ಅಕ್ಷತೆ ನೀಡಿ, ಆಹ್ವಾನ ನೀಡುತ್ತಿದ್ದಾರೆ. ಇದನ್ನು ಸಹಿಸಲಾಗದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಾನೂನನ್ನು ದುರುಪಯೋಗ ಪಡಿಸಿಕೊಂಡು ಹಿಂದು ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿದೆ. ಕೂಡಲೇ ಕೇಸ್​ಗಳನ್ನು ವಾಪಸ್ ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.

    ಪ್ರಮುಖರಾದ ಉಮೇಶ ಹರಿಕಾಂತ, ಸಂತೋಷ ನಾಯ್ಕ ಬ್ಯಾಗದ್ದೆ, ಕೇಮು ವಂದಿಗೆ, ಅಹೀಶ ಸೇರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts