ಸೆ.1 ರಂದು ಉಜಿರೆಯಲ್ಲಿ ಹಿಂದು ಸಮಾವೇಶ : ಶರಣ್ ಪಂಪ್‌ವೆಲ್ ಮಾಹಿತಿ

ಬೆಳ್ತಂಗಡಿ: ವಿಶ್ವ ಹಿಂದು ಪರಿಷತ್‌ಗೆ 60 ವರ್ಷ ತುಂಬುತ್ತಿರುವ ಹಿನ್ನೆಲೆ, ಸೆ.1ರಂದು ಉಜಿರೆಯಲ್ಲಿ ಬೃಹತ್ ಹಿಂದು ಸಮಾವೇಶ ನಡೆಯಲಿದೆ ಎಂದು ವಿಹಿಂಪ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ದೇಶವ್ಯಾಪಿ ಕಾರ್ಯಕ್ರಮ ನಿಮಿತ್ತ ದ.ಕ. ಜಿಲ್ಲೆ, ಉಡುಪಿ ಸೇರಿ 30ಕ್ಕೂ ಅಧಿಕ ಪ್ರಖಂಡದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳ್ತಂಗಡಿ ಕಾರ್ಯಕ್ರಮಕ್ಕೆ ಉತ್ಸವ ಸಮಿತಿ ಆಯ್ಕೆ ಮಾಡಲಾಗಿದೆ. ಸಾಧು-ಸಂತರು, ಧಾರ್ಮಿಕ ಮುಖಂಡರು, ಜಾತಿ ಪ್ರಮುಖರು, ವಿವಿಧ ಸಂಘ-ಸಂಸ್ಥೆಗಳು ಜತೆಗೂಡಿ ಶೋಭಾಯಾತ್ರೆ ನಡೆಸಲಿದ್ದೇವೆ. ಸಮಾಜದಲ್ಲಿ ಪರಿವರ್ತನೆ ಮಾಡುವ ಕೆಲಸವಾಗಲಿದ್ದು, ಪರಿಸರ ಸಂರಕ್ಷಣಾ ದೃಷ್ಟಿಯಿಂದ, ಡ್ರಗ್ಸ್ ಮುಕ್ತವಾಗಿಸುವ ಕಾರ್ಯವಾಗಲಿದೆ ಎಂದರು.

ವಿಹಿಂಪ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಮಾತನಾಡಿ, ಸೆ.1ರಂದು ಬೆಳಗ್ಗೆ 9.30ಕ್ಕೆ ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಿಂದ ಶೋಭಾಯಾತ್ರೆ ನಡೆಯಲಿದೆ. ವಿಹಿಂಪ ಹಿರಿಯ ಕಾರ್ಯಕರ್ತ ಮೋಹನ್ ರಾವ್ ಕಲ್ಮಂಜ ಚಾಲನೆ ನೀಡುವರು. ಸಂಘದ ಹಿರಿಯರಾದ ಶೇಷಗಿರಿ ಶೆಣೈ, ಸತೀಶ್ಚಂದ್ರ ಸುರ್ಯಗುತ್ತು, ಗಣೇಶ್ ಭಟ್ ಕಾಂತಾಜೆ, ಪೂರಣ್ ವರ್ಮ, ದಯಾಕರ್ ಭಾಗವಹಿಸಲಿದ್ದಾರೆ ಎಂದರು.

ವಿಹಿಂಪ ಷಷ್ಠಿಪೂರ್ತಿ ಉತ್ಸವ ಸಮಿತಿ ಅಧ್ಯಕ್ಷ ಡಾ.ಎಂ.ಎಂ.ದಯಾಕರ್, ದಿನೇಶ್ ಚಾರ್ಮಾಡಿ, ಸಂಪತ್ ಬಿ.ಸುವರ್ಣ, ಮೋಹನ್ ಬೆಳ್ತಂಗಡಿ ಉಪಸ್ಥಿತರಿದ್ದರು.

ಕುಣಿತ ಭಜನೆ, ಚೆಂಡೆ ವಾದ್ಯ, ಕೀಲು ಕುದುರೆ

11.30ಕ್ಕೆ ಉಜಿರೆ ಶಾರದಾ ಮಂಟಪದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1.30ಕ್ಕೆ ಅನ್ನಸಂತರ್ಪಣೆ ನಡೆಯಲಿದ್ದು, ಶೋಭಾಯಾತ್ರೆಯಲ್ಲಿ ಕೃಷ್ಣವೇಷ, 60 ಭಜನಾ ತಂಡಗಳಿಂದ ಕುಣಿತ ಭಜನೆ, ಚೆಂಡೆ ವಾದ್ಯ, ಕೀಲು ಕುದುರೆ, ಬೈಕ್‌ರೄಾಲಿ ಸಾಗಿಬರಲಿದೆ. ಒಟ್ಟು 2,500 ಜನ, ಭಜನಾ ತಂಡ ಭಾಗವಹಿಸುವ ನಿರೀಕ್ಷೆಯಿದೆ ಎಂದು ನವೀನ್ ನೆರಿಯ ತಿಳಿಸಿದರು.

Share This Article

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…

ಕೂದಲು ಉದುರುವ ಸಮಸ್ಯೆ ಪರಿಹಾರಕ್ಕೆ ರಾಮಬಾಣ ಹರಳೆಣ್ಣೆ ಹೇರ್​​ ವಾಶ್​​​; ನಿಮಗಾಗಿ ಹೆಲ್ತಿ ಮಾಹಿತಿ | Health Tips

ನಮ್ಮ ಕೂದಲನ್ನು ಸ್ವಚ್ಛವಾಗಿಡಲು ಮತ್ತು ಕೂದಲು ಉದುರುವುದನ್ನು ತಡೆಯಲು ಏನೆನೋ ಮಾಡುತ್ತೇವೆ. ನಮ್ಮ ಕೂದಲಿನ ಬೆಳವಣಿಗೆಯ…