More

    ಹಿಂದೂ ಧರ್ಮದ ಗುರುಗಳು ದಕ್ಷಿಣ ಭಾರತದಲ್ಲಿ ಮಿಷನರಿಗಳನ್ನು ಮೀರಿಸಿದ್ದಾರೆ: ಮೋಹನ್​ ಭಾಗವತ್​

    ಜೈಪುರ​: ದಕ್ಷಿಣ ಭಅರತದ ನಾಲ್ಕು ರಾಜ್ಯಗಳಲ್ಲಿ ಹಿಂದೂ ಧರ್ಮದ ಆಧ್ಯಾತ್ಮಿಕ ಗುರುಗಳು ಮಾಡಿರುವ ಸೇವೆಯೂ ಮಿಷನರಿಗಳನ್ನು ಮೀರಿಸುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಾ(RSS) ಸಂಘಟನೆಯ ಮುಖ್ಯಸ್ಥ ಮೋಹನ್​ ಭಾಗವತ್​ ಹೇಳಿದ್ದಾರೆ.

    ರಾಜಸ್ಥಾನದ ಜೈಪುರದಲ್ಲಿ ರಾಷ್ಟ್ರೀಯ ಸೇವಾ ಸಂಗಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಭಾಗವತ್​ ಯಾವುದೇ ಪಲಾಪೇಕ್ಷೆ ಇಲ್ಲದೆ ಸೇವೆ ಮಾಡುವುದರಿಂದ ಸ್ವಸ್ಥ ಸಮಾಜ ನಿರ್ಮಾಣವಾಗುತ್ತದೆ. ಯಾವುದಾದರು ಒಂದು ವರ್ಗ ಸಮಾಜದಿಂದ ವಂಚಿತರಾಗಿದ್ದರೆ ಅಂತಹವರನ್ನು ದೇಶದ ಒಳಿತಿಗಾಗಿ ಮೇಲೆತ್ತ ಬೇಕು ಎಂದಿದ್ದಾರೆ.

    ಇದನ್ನೂ ಓದಿ: ಪಾಕಿಸ್ತಾನದ ಜನರು ವಿಭಜನೆಯ ಬಗ್ಗೆ ಅತೃಪ್ತಿ ಹೊಂದಿದ್ದಾರೆ: ಮೋಹನ್​ ಭಾಗವತ್​

    ಸಾಮಾನ್ಯವಾಗಿ ಬುದ್ಧಿ ಜೀವಿಗಳು ಈ ತರಹದ ಕೆಲಸಗಳಿಗೆ ಮಿಷನರಿಗಳ ಬಗ್ಗೆ ಹೇಳುತ್ತಾರೆ. ಆದರೆ, ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲಿ ಹಿಂದೂ ಧರ್ಮದ ಆಧ್ಯಾತ್ಮಿಕ ಗುರುಗಳು ಮಾಡಿರುವ ಸೇವೆಯೂ ಮಿಷನರಿಗಳನ್ನು ಮೀರಿಸುತ್ತದೆ ಎಂದು ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಮೋಹನ್​ ಭಾಗವತ್​ ಅಭಿಪ್ರಾಯಪಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts