blank

ವೀರ ಸಾವರ್ಕರ್​ ಹಾಗೂ ಶ್ಯಾಮ್​ ಪ್ರಸಾದ್​ ಮುಖರ್ಜಿಗೆ ಗಣರಾಜ್ಯೋತ್ಸವದಂದು ಭಾರತ ರತ್ನ ಪುರಸ್ಕಾರ ಘೋಷಣೆ?

blank

ನವದೆಹಲಿ: ಗಣರಾಜ್ಯೋತ್ಸವದಂದು ಕೇಂದ್ರ ಸರ್ಕಾರ ವೀರ ಸಾವರ್ಕರ್​ ಹಾಗೂ ಶ್ಯಾಮ್​ ಪ್ರಸಾದ್​ ಮುಖರ್ಜಿ ಅವರಿಗೆ ಭಾರತ ರತ್ನ ಪುರಸ್ಕಾರ ಘೋಷಣೆ ಮಾಡಲಿದೆ ಎಂದು ಅಖಿಲ ಭಾರತ ಹಿಂದು ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಹಾರಾಜ್​ ತಿಳಿಸಿದ್ದಾರೆ.

ವೀರ ಸಾವರ್ಕರ್ ಮತ್ತು ಶ್ಯಾಮ್ ಪ್ರಸಾದ್ ಮುಖರ್ಜಿ ಅವರಿಗೆ ಭಾರತ ರತ್ನ ನೀಡುವಂತೆ ಅಖಿಲ ಭಾರತ ಹಿಂದು ಮಹಾಸಭಾ ಪ್ರಧಾನಿ ಅವರನ್ನು ಒತ್ತಾಯಿಸಿದೆ. ಅಲ್ಲದೆ ಸ್ವಾಮಿ ಚಕ್ರಪಾಣಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಕೂಡ ಬರೆದಿದ್ದಾರೆ.

ಇಬ್ಬರಿಗೆ ಭಾರತ ರತ್ನ ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಹಲವು ಬಾರಿ ಪ್ರಧಾನಿಗಳಿಗೆ ಮನವಿ ಮಾಡಿದ್ದೇನೆ. ಇಬ್ಬರು ಮಹಾನ್​ ದೇಶ ಭಕ್ತರು. 2ನೇ ಬಾರಿಗೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಇಬ್ಬರಿಗೆ ಭಾರತ ರತ್ನ ನೀಡುವ ಭರವಸೆಯನ್ನು ಬಿಜೆಪಿ ನೀಡಿತ್ತು. ಈಗ ಅಧಿಕಾರದಲ್ಲಿ ಇದೆ. ಗಣರಾಜ್ಯೋತ್ಸವದಂದು ಘೋಷಣೆ ಮಾಡಬೇಕು ಎಂದರು.

ವೀರ ಸಾವರ್ಕರ್ 1937 ರಿಂದ 1942 ರವರೆಗೆ ಅಖಿಲ ಭಾರತ ಹಿಂದು ಮಹಾಸಭಾದ 15 ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಸಭಾದ 16 ನೇ ರಾಷ್ಟ್ರೀಯ ಅಧ್ಯಕ್ಷರಾಗಿ 1943 ರಿಂದ 1944 ರವರೆಗೆ ಸೇವೆ ಸಲ್ಲಿಸಿದ್ದಾರೆ. (ಏಜೆನ್ಸೀಸ್​)

Share This Article

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…