ಬಾಗಲಕೋಟೆ: ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಒಂದು ತಿಂಗಳುಗಳ ಕಾಲ ನಡೆಯುವ ಉಪವಾಸ ವ್ರತದ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಮುಸ್ಲಿಂ ಸಮಾಜದವರಿಗೆ ಇಫ್ತಿಯಾರ್ ಕೂಟ ಆಯೋಜನೆ ಮಾಡಲಾಗಿತ್ತು.
ಬಾಗಲಕೋಟೆಯ ನವನಗರದ ಈದ್ಗಾ ಮಸೀದಿಯಲ್ಲಿ ಆಯೋಜಿಸಲಾಗಿದ್ದ ಇಫ್ತಿಯಾರ್ ಕೂಟದಲ್ಲಿ ಹಿಂದು-ಮುಸ್ಲಿಂ ಬಾಂಧವರಿಬ್ಬರು ಭಾಗಿಯಾಗುವ ಮೂಲಕ ಭಾವೈಕ್ಯತೆಯನ್ನು ಮೆರೆದರು.
ಪರಸ್ಪರ ಶುಭ
ಇಪ್ತಿಯಾರ್ ಕೂಟ ಆರಂಭಕ್ಕೂ ಮೊದಲು ಸ್ಥಳೀಯ ಈದ್ಗಾ ಮಸೀದಿಯಲ್ಲಿ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ನಂತರ ಹಿಂದು-ಮುಸ್ಲಿಂ ಬಾಂಧವರಿಬ್ಬರೂ ಪರಸ್ಪರ ಶುಭ ಕೋರಿ ಇಫ್ತಿಯಾರ್ ಕೂಟದಲ್ಲಿ ಭಾಗಿಯಾದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರ ಮೆಚ್ಚುಗೆ ಗಳಿಸಿದೆ.
ಅಂದಹಾಗೆ ರಂಜಾನ್ ಮಾಸದಲ್ಲಿ ಮುಸ್ಲಿಂ ಬಾಂಧವರು ನಸುಕಿನಿಂದ ಸಂಜೆಯವರೆಗೆ ಉಪವಾಸ ಮಾಡುತ್ತಾರೆ. ಒಂದು ಹನಿ ನೀರು ಕುಡಿಯದೆ ತಮ್ಮ ಕಾಯಕವನ್ನೂ ಮಾಡುತ್ತಾರೆ. ಏಪ್ರಿಲ್ 21ರಂದು ರಂಜಾನ್ ಉಪವಾಸಕ್ಕೆ ತೆರೆ ಬೀಳಲಿದೆ.
ಬೆಳಗ್ಗೆಯಿಂದ ಬೆಂಗಳೂರು KSR ರೈಲು ನಿಲ್ದಾಣಕ್ಕೆ ಆಗಮಿಸದ ರೈಲುಗಳು: ಪ್ರಯಾಣಿಕರ ಪರದಾಟ
ನಾಯಿ ಕಾರಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ; ಹತ್ಯೆಗೆ ಸಾಥ್ ನೀಡಿದ ಆರೋಪದ ಮೇಲೆ ಪತ್ನಿಯೂ ಅಂದರ್!