More

    ಹಿಂದು ರಾಷ್ಟ್ರ ಕನಸು ನನಸಾಗದು; ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ

    ರಾಯಚೂರು: ಕೇಂದ್ರದ ಬಿಜೆಪಿ ಸರ್ಕಾರವು ಆರ್‌ಎಸ್‌ಎಸ್ ಅಜೆಂಡಾವನ್ನು ಜಾರಿ ತರಲು ನಿರಂತರ ಪ್ರಯತ್ನಿಸುತ್ತಿದೆ. ದೇಶವನ್ನು ಹಿಂದು ರಾಷ್ಟ್ರ ಮಾಡುವ ಕನಸು ಎಂದಿಗೂ ನನಸಾಗದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

    ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುರುವಾರ ಆಗಮಿಸಿದ್ದ ಅವರು ನಗರದ ಹೊರವಲಯದ ಯರಮರಸ್ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಎಎ ಸೇರಿ ಇನ್ನಾವುದೆ ಕಾಯ್ದೆಯಿಂದ ದೇಶವನ್ನು ಹಿಂದು ರಾಷ್ಟ್ರವನ್ನಾಗಿ ಮಾಡಲು ಸಾಧ್ಯವಿಲ್ಲ ಎಂದರು.

    ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಗೆಲುವಿಗೆ ಸಿಎಎದಂಥ ಜನ ವಿರೋಧಿ ಕಾನೂನು ಕಾರಣವಾಗಿಲ್ಲ ಎಂಬುದನ್ನು ಬಿಜೆಪಿ ಅರಿಯಬೇಕು. ಕೇಜ್ರಿವಾಲ್‌ರ ಅಭಿವೃದ್ಧಿ ಕಾರ್ಯಕ್ರಮಗಳು ಗೆಲುವಿಗೆ ಕಾರಣವಾಗಿವೆ. ಕಾಂಗ್ರೆಸ್‌ನ ಹೀನಾಯ ಸೋಲಿನ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ಮೂರು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪೆಟ್ಟು ಬಿದ್ದಿದೆ. ಬಿಜೆಪಿ ಕೆಲವು ಸ್ಥಾನಗಳನ್ನು ಗೆದ್ದರೂ ಶೇಕಡಾವಾರು ಮತಗಳಿಕೆ ಕಡಿಮೆಯಾಗಿದೆ. ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಗೆ ಕಷ್ಟವಿದೆ. ತಮಿಳುನಾಡು, ಕೇರಳದಲ್ಲಿ ಬಿಜೆಪಿಗೆ ನೆಲೆಯಿಲ್ಲ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಶಕ್ತಿ ಹೆಚ್ಚಿಸಿಕೊಂಡಿದ್ದಾರೆ. ತೃತೀಯ ರಂಗವನ್ನು ಮತ್ತೆ ಕಟ್ಟುವ ಪ್ರಯತ್ನ ಮಾಡಬಹುದು. ಅದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ದೇಶದ ಹಲವು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಬಲವಾಗಿದ್ದು, ಆ ನಾಯಕರ ಜತೆಗೆ ಮಾತುಕತೆ ನಡೆಸಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts