ನೀರಿನ ಅಭಾವವಾಗದಂತೆ ಕ್ರಮವಹಿಸಿ; ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ

ಕನಕಗಿರಿ: ಬೇಸಿಗೆ ಆರಂಭವಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಕುಡಿವ ನೀರಿನ ಅಭಾವವಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಸೂಚಿಸಿದರು.


ತಾಲೂಕಿನ ಹಿರೇಖೇಡ, ಕರಡೋಣಿ ಹಾಗೂ ನವಲಿ ಗ್ರಾಪಂ ವ್ಯಾಪ್ತಿಯಲ್ಲಿ ಎಸ್‌ಬಿಎಂ, ಎನ್‌ಆರ್‌ಎಲ್‌ಎಂ ಹಾಗೂ ನರೇಗಾ ಕಾಮಗಾರಿ ವೀಕ್ಷಿಸಿ ಶನಿವಾರ ಮಾತನಾಡಿದರು. ಬೇಸಿಗೆಯಲ್ಲಿ ಅಂತರ್ಜಲ ಮಟ್ಟ ಕುಸಿತದಿಂದ ಕುಡಿವ ನೀರಿನ ಸಮಸ್ಯೆ ಉಂಟಾಗಬಹುದು. ಅದಕ್ಕಾಗಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದರು.

ನೀರಿನ ಅಭಾವವಾಗದಂತೆ ಕ್ರಮವಹಿಸಿ; ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ
ನವಲಿಯ ಚೆಕ್‌ಪೋಸ್ಟ್‌ಗೆ ಶನಿವಾರ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಪಂ ಇಒ ಚಂದ್ರಶೇಖರ ಕಂದಕೂರು ಇತರರಿದ್ದರು.


ನವಲಿ ರಸ್ತೆಯಲ್ಲಿರುವ ಎಸ್‌ಎಂಸಿ ಕಾಮಗಾರಿ ವೀಕ್ಷಿಸಿ, ಹೊಸ ಕೆರೆಗಳ ನಿರ್ಮಾಣಕ್ಕೆ ಕ್ರಮವಹಿಸಲು ಸಾಮಾಜಿಕ ಅರಣ್ಯ ಅಧಿಕಾರಿಗಳಿಗೆ ಸೂಚಿಸಿದರು. ಕರಡೋಣಿಯ ಅಮೃತ ಸರೋವರ ಕೆರೆ ವೀಕ್ಷಿಸಿದ ಸಿಇಒ ಮೆಚ್ಚುಗೆ ವ್ಯಕ್ತಪಡಿಸಿದರು.


ಚೆಕ್ ಪೋಸ್ಟ್ ವೀಕ್ಷಣೆ: ನವಲಿಯ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿದ ಜಿಪಂ ಸಿಇಒ, ಮೂಲ ಸೌಕರ್ಯ ಹಾಗೂ ತಪಾಸಣೆ ಮಾದರಿ ಪರಿಶೀಲನೆ ಮಾಡಿದರು. ವಾಹನಗಳ ತಪಾಸಣೆ ವೇಳೆ ಜನರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕೆಂದು ಸಿಬ್ಬಂದಿಗೆ ಸೂಚಿಸಿದರು. ತಾಪಂ ಇಒ ಚಂದ್ರಶೇಖರ ಕಂದಕೂರ, ಸಹಾಯಕ ನಿರ್ದೇಶಕ ವೀರಣ್ಣ ನಕ್ರಳ್ಳಿ, ಆರ್‌ಡಬ್ಲುೃಎಸ್ ಎಇಇ ಸತೀಶ್ ಇತರರಿದ್ದರು.

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…