blank

ಖಾತ್ರಿ ಯೋಜನೆಯಲ್ಲಿ ಜಿಲ್ಲೆಗೆ ಹಿನ್ನಡೆ

blank

ಹಿರಿಯೂರು: ಉದ್ಯೋಗ ಖಾತ್ರಿ ಕಾಮಗಾರಿಗಳಲ್ಲಿ ಚಿತ್ರದುರ್ಗ ಜಿಲ್ಲೆ 27ನೇ ಸ್ಥಾನದಲ್ಲಿದ್ದು, ಪಿಡಿಒಗಳು ಹೆಚ್ಚು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಟಿ.ಯೋಗೇಶ್ ತಾಕೀತು ಮಾಡಿದರು.

blank

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ನರೇಗಾ ಯೋಜನೆಯಡಿ ಪ್ರಗತಿ ಕಾಣುತ್ತಿಲ್ಲ ಎಂದು ಬೇಸರಿಸಿದರು.

ಪ್ರಸ್ತುತ ಅಂಕಿ ಅಂಶಗಳ ಮಾಹಿತಿ ಗಮನಿಸಿದರೆ ಕೆಲವು ಗ್ರಾಮ ಪಂಚಾಯಿತಿಗಳು ಮಾತ್ರ ಸ್ವಲ್ಪ ಪ್ರಮಾಣದಲ್ಲಿ ಪ್ರಗತಿ ಸಾಧಿಸಿರುವುದು ತಿಳಿಯುತ್ತದೆ. ಉಳಿದ ಕಡೆ ನೀರೀಕ್ಷಿತ ಪ್ರಗತಿ ಇಲ್ಲ ಎಂದರು.

ಮಾನವ ದಿನಗಳ ಸೃಜನೆಯೂ ಇಲ್ಲದಂತಾಗಿದೆ. ಅದರಲ್ಲೂ ಯರಬಳ್ಳಿ, ಕರಿಯಾಲ ಶೂನ್ಯವಾಗಿವೆ. ಯೋಜನೆ ಅಡಿ ಜಮೀನಿನಲ್ಲಿ ಬದು, ಕೃಷಿ ಹೊಂಡ ನಿರ್ಮಾಣಕ್ಕೆ ಅವಕಾಶ ಇದೆ. ಇಂತಹ ಕಾರ್ಯಗಳಿಗೆ ಆದ್ಯತೆ ನೀಡಿ ಎಂದು ಹೇಳಿದರು.

ಲಾಕ್‌ಡೌನ್‌ನಿಂದಾಗಿ ಸಾಕಷ್ಟು ಜನರು ನಗರಗಳಿಂದ ಹಳ್ಳಿಗಳಿಗೆ ಬಂದಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಜಾಬ್ ಕಾರ್ಡ್ ಮಾಡಿಸಿಕೊಡುವ ಮೂಲಕ ನರೇಗಾ ಯೋಜನೆಯಡಿ ಕೆಲಸಗಳನ್ನು ಕೊಡಿ ಎಂದು ಸೂಚಿಸಿದರು.

ಶಾಸಕಿ ಕೆ.ಪೂರ್ಣಿಮಾ ಮಾತನಾಡಿ, ಸಭೆಯಲ್ಲಿ ಪಿಡಿಒಗಳು ಸಮರ್ಪಕ ಮಾಹಿತಿ ನೀಡಬೇಕು. ತಪ್ಪಿಸಿಕೊಳ್ಳಲು ಸುಳ್ಳು ಮಾಹಿತಿ ನೀಡಿದರೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಸತಿ ಮಂಜೂರಾತಿಗಾಗಿ ಗ್ರಾಮ ಪಂಚಾಯಿತಿವಾರು ಸಮೀಕ್ಷೆ ನಡೆಸಿ ಪಟ್ಟಿ ನೀಡುವಂತೆ ಹೇಳಿ ಒಂದೂವರೆ ತಿಂಗಳಾದರೂ ನೀಡಿಲ್ಲ ಎಂದು ದೂರಿದರು.

ತಹಸೀಲ್ದಾರ್ ಜಿ.ಎಚ್.ಸತ್ಯನಾರಾಯಣ, ತಾಪಂ ಇಒ ಹನುಮಂತಪ್ಪ ಇದ್ದರು.

Share This Article
blank

ಮನೆಯಲ್ಲಿರುವ ಹಲ್ಲಿಗಳನ್ನು ಓಡಿಸಲು ಇಲ್ಲಿದೆ ಸುಲಭ ಮಾರ್ಗ.. ಒಮ್ಮೆ ಟ್ರೈ ಮಾಡಿ | Lizards

Lizards: ಹಲ್ಲಿಗಳು ಹೆಚ್ಚಾಗಿ ಮನೆಯ ಗೋಡೆಗಳ ಮೇಲೆ ಮತ್ತು ಅಡುಗೆಮನೆಯಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಹಲ್ಲಿಗಳ ಬಗ್ಗೆ…

ಹನಿ-ಹನಿ ಮೂತ್ರ ಬರುತ್ತಿದ್ರೆ ಈ ಅಂಗಕ್ಕೆ ಹಾನಿಯಾಗಿದೆ ಎಂದರ್ಥ!; ಅನಿಯಂತ್ರಿತ ಮೂತ್ರದ ಸಮಸ್ಯೆಗೆ ಕಾರಣ ಏನು? | Urinary

Urinary : ಸಾಮಾನ್ಯವಾಗಿ ಬೇಸಿಗೆ ಸಮಯದಲ್ಲಿ ಮೂತ್ರ ಸಂಬಂಧಿತ ಸಮಸ್ಯೆಗಳು ಭಾಧಿಸುತ್ತವೆ. ಅನೇಕ ಜನರಿಗೆ ಮೂತ್ರ…

blank