ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಯುತ ಶಿಕ್ಷಣ

blank

ಹಿರಿಯೂರು: ದೇಶದ ಪ್ರತಿ ಪ್ರಜೆಗೂ ಮೌಲ್ಯಯುತ ಶಿಕ್ಷಣ ತಲುಪಿದಾಗ ಮಾತ್ರ ಎಲ್ಲರ ಬದುಕು ಹಸನಾಗುತ್ತದೆ ಎಂದು ಡಾ.ಡಿ.ಧರಣೇಂದ್ರಯ್ಯ ಹೇಳಿದರು.

ನೆಹರು ಯುವ ಕೇಂದ್ರ, ಕಳವಿಭಾಗಿ ಶ್ರೀ ರಂಗನಾಥಸ್ವಾಮಿ ಸಾಂಸ್ಕೃತಿಕ ಕಲಾಸಂಘದಿಂದ ನಗರದ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ವಿಷಯಾಧಾರಿತ ಶಿಕ್ಷಣ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶತಮಾನಗಳಿಂದ ದಲಿತರು, ಹಿಂದುಳಿದ ಮತ್ತು ಮಹಿಳೆಯರು ಅಕ್ಷರದಿಂದ ವಂಚಿತರಾಗಿದ್ದು, ಸಂವಿಧಾನದ ಮೂಲಕ ಸಮಾನ ಶಿಕ್ಷಣದ ಅವಕಾಶ ಕಲ್ಪಿಸಿದರು. ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಶ್ರಮದಿಂದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ನಾಂದಿಯಾಯಿತು ಎಂದರು.

ಉಪನ್ಯಾಸಕ ಎಸ್.ಕಾಂತರಾಜ್ ಮಾತನಾಡಿ, ನಿರುದ್ಯೋಗ ಸಮಸ್ಯೆ, ಹಸಿವು, ಬಡತನ ನಿರ್ಮೂಲನೆಗೆ ಕೇಂದ್ರ ಸರ್ಕಾರ ಹಲವು ಯೋಜನೆ ಜಾರಿಗೆ ತಂದಿದೆ. ಉದ್ಯೋಗ ಖಾತ್ರಿ, ಪ್ರಧಾನ ಮಂತ್ರಿ ಕೌಶಲ ಯೋಜನೆ, ಎಸ್‌ಜಿಎಸ್, ಪ್ರೇರಣಾ, ಐರಾವತ, ಸ್ವಯಂ ಉದ್ಯೋಗ ಯೋಜನೆ ಜನರಿಗೆ ಪೂರಕವಾಗಿವೆ ಎಂದು ಹೇಳಿದರು.

ಚಿತ್ರದುರ್ಗದ ವೆಂಕಟೇಶ್ವರ ಬಿ.ಇಡಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜಿ.ಇ.ಭೈರಸಿದ್ದಪ್ಪ, ವಕೀಲರ ಸಂಘದ ತಾಲೂಕು ಜಂಟಿ ಕಾರ್ಯದರ್ಶಿ ಕೆ.ರಾಜಪ್ಪ ಮಾತನಾಡಿದರು.

ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಎಸ್.ಜಿ.ರಂಗಸ್ವಾಮಿ ಸಕ್ಕರ, ದೈಹಿಕ ಶಿಕ್ಷಣ ನಿರ್ದೇಶಕ ಎಚ್.ತಿಪ್ಪೇಸ್ವಾಮಿ, ಉಪನ್ಯಾಸಕರಾದ ಡಾ.ಎಸ್.ಮಾರುತಿ ಡಾ. ಎಸ್.ಡಿ.ಪೂರ್ಣಿಮಾ, ಗೌಡ, ಎಲ್.ಕಾಮರಾಜ್, ಎನ್.ನಾಗಲಕ್ಷ್ಮಿ, ಎನ್.ಉಮಾದೇವಿ ಇದ್ದರು.

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…