ಅಟಲ್ ಭೂಜಲ ಯೋಜನೆ ಭಾಗ್ಯ

blank

ಹಿರಿಯೂರು: ಜಲಮೂಲ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಟಲ್ ಭೂಜಲ ಯೋಜನೆಗೆ ಹಿರಿಯೂರು, ಮೊಳಕಾಲ್ಮೂರು, ಚಳ್ಳಕೆರೆ ತಾಲೂಕುಗಳು ಸೇರ್ಪಡೆಯಾಗಿವೆ.

ಬಯಲು ಸೀಮೆಯಲ್ಲಿ ಯಾವುದೇ ಶಾಶ್ವತ ಜಲಮೂಲಗಳಿಲ್ಲ. ಮಳೆ ಕೊರತೆ, ಭೀಕರ ಬರ, ಅಂತರ್ಜಲ ಕುಸಿತದಿಂದ ಜನ-ಜಾನುವಾರು ಹನಿ ನೀರಿಗೂ ಪರಿತಪಿಸುವಂತಾಗಿದೆ. ಲಭ್ಯವಿರುವ ಪ್ರಾಕೃತಿಕ ಜಲಮೂಲ ಸಂರಕ್ಷಣೆ ಸವಾಲಾಗಿದ್ದು, ಪೂರ್ವಜರು ಕಟ್ಟಿಸಿದ ಕೆರೆ-ಕಟ್ಟೆ, ಹಳ್ಳಕೊಳ್ಳಗಳ ಅಭಿವೃದ್ಧಿ, ಹಸಿರೀಕರಣ, ನದಿ ಪಾತ್ರದಲ್ಲಿ ಚೆಕ್ ಡ್ಯಾಂ ನಿರ್ಮಾಣ, ಕೊಳವೆ ಬಾವಿಗಳ ಜಲಮರುಪೂರಣಕ್ಕೆ ಕೇಂದ್ರದ ಅನುದಾನ ಲಭ್ಯವಾಗಲಿದೆ.

ಚಳ್ಳಕೆರೆ, ಮೊಳಕಾಲ್ಮೂರು, ಹಿರಿಯೂರು ತಾಲೂಕುಗಳಲ್ಲಿ ಅಂತರ್ಜಲ ಅಪಾಯದ ಮಟ್ಟ ತಲುಪಿದ್ದು, ಕೆಲ ಗ್ರಾಮಗಳಲ್ಲಿ ಪ್ಲೋರೈಡ್‌ಯುಕ್ತ ನೀರು ಸೇವಿಸುವ ಪರಿಸ್ಥಿತಿ ಇದೆ. ಈ ತಾಲೂಕು ವ್ಯಾಪ್ತಿಯಲ್ಲಿ ಶಾಶ್ವತ ಕುಡಿವ ನೀರಿನ ಯೋಜನೆ ರೂಪಿಸಲು ಅಟಲ್ ಭೂಜಲ ಯೋಜನೆ ನೆರವಾಗಲಿದೆ.

1200 ಕೋಟಿ ಅನುದಾನ ಲಭ್ಯ: ರಾಜ್ಯದ 14 ಜಿಲ್ಲೆಯ 40 ತಾಲೂಕುಗಳಲ್ಲಿ ಅಟಲ್ ಭೂಜಲ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರ 1,201.52 ಕೋಟಿ ರೂ. ಅನುದಾನ ನೀಡಲಿದೆ. ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದರೆ ಭವಿಷ್ಯದಲ್ಲಿ ಜೀವಜಲ ಸಮಸ್ಯೆ ದೂರಾಗಲಿದೆ.

ಈಗಾಗಲೇ ಹಿರಿಯೂರು ತಾಲೂಕಿನ ವೇದಾವತಿ ನದಿ ಪಾತ್ರದಲ್ಲಿ ಬ್ಯಾರೇಜ್ ನಿರ್ಮಾಣ, ಜಲಾಮೃತ-ಕೆರೆ ಸಂಜೀವಿನಿ ಯೋಜನೆಗಳು ಪ್ರಗತಿಯಲಿದ್ದು, ಅಟಲ್ ಭೂಜಲ ಯೋಜನೆಯಡಿ ವಿಶೇಷ ಅನುದಾನ ಲಭ್ಯವಾಗುವುದರಿಂದ ಕೆರೆ, ಕಾಲುವೆ, ಹಳ್ಳ-ಕೊಳ್ಳಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಹೆಚ್ಚು ಸಹಕಾರಿ ಆಗಲಿದೆ.

 

ಖಂಡೇನಹಳ್ಳಿ ಬಸವರಾಜ್

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…