More

    ವಿವಿ ಪುರ ಗ್ರಾಪಂ ಮಾಜಿ ಅಧ್ಯಕ್ಷೆ ಸದಸ್ಯತ್ವ ರದ್ದು

    ಹಿರಿಯೂರು: ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ನಿಯಮ ಉಲ್ಲಂಘಿಸಿ ಅಧಿಕಾರ-ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದಡಿ ಗ್ರಾಪಂ ಮಾಜಿ ಅಧ್ಯಕ್ಷೆ ಎಲ್.ಅನಿಲಮ್ಮ ಅವರ ಸದಸ್ಯತ್ವವನ್ನು ಸರ್ಕಾರ ರದ್ದುಗೊಳಿಸಿದೆ.

    ವಿವಿ ಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರಾಗಿದ್ದ ಅನಿಲಮ್ಮ 2018-19ನೇ ಸಾಲಿನ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮದ ಜೈರಾಂ ಠಾಕೂರ್ ಜಮೀನು-ವಜ್ರ ಸಿದ್ದಪ್ಪನ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ 9.50 ಲಕ್ಷ ರೂ., ವೆಚ್ಚದಲ್ಲಿ ಕ್ರಿಯಾಯೋಜನೆ ಮತ್ತು ಅರಣ್ಯ ಇಲಾಖೆ ಅನುಮತಿ ಪಡೆಯದೆ ಕಳಪೆ ಕಾಮಗಾರಿ ಕೈಗೊಂಡಿದ್ದರು.

    ಜಿಪಂ ಒಂಬುಡ್ಸ್ ಮನ್ ನಡೆಸಿದ ತನಿಖೆಯಲ್ಲಿ ಅವ್ಯವಹಾರ ನಡೆದಿರುವುದು ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಪರಿಶೀಲನೆ ನಡೆಸಿ ಸದಸ್ಯತ್ವ ರದ್ದುಗೊಳಿಸಿದೆ ಎಂದು ರಾಜ್ಯ ಭ್ರಷ್ಟಚಾರ ನಿರ್ಮೂಲನೆ ಅಧ್ಯಕ್ಷ ಎ.ಉಮೇಶ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts