More

    ಏತ ನೀರಾವರಿ ಯೋಜನೆಗೆ ಪುನಶ್ಚೇತನ

    ಹಿರಿಯೂರು: ತಾಲೂಕಿನ ಕುಂದಲಗುರ ಗ್ರಾಮದ ಬಳಿ ನನೆಗುದಿಗೆ ಬಿದ್ದಿರುವ ಅಂದಾಜು 10 ಕೋಟಿ ರೂ. ವೆಚ್ಚದ ಇಕ್ಕನೂರು ಕೆರೆಯ ಏತ ನೀರಾವರಿ ಯೋಜನೆ ಸ್ಥಳಕ್ಕೆ ಸಂಸದ ಎ.ನಾರಾಯಣಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು.

    ಬಳಿಕ ಸುದ್ದಿಗಾರರ ಜತೆ ಮಾತನಾಡಿ, 1974ರಲ್ಲಿ ಈ ಯೋಜನೆಯ ಕಾಮಗಾರಿ ಪೂರ್ಣಗೊಂಡಿದೆ. ಆದರೆ, ಸುವರ್ಣಮುಖಿ ನದಿಯಲ್ಲಿ ನೀರು ಹರಿಯದ ಕಾರಣ ಈ ಯೋಜನೆ ಸ್ಥಗಿತಗೊಂಡಿದ್ದು, ಕಟ್ಟಡಗಳು ಹಾಗೂ ಯಂತ್ರೋಪಕರಣಗಳ ಪರಿಕರಗಳು ತುಕ್ಕುಹಿಡಿಯುವ ಸ್ಥಿತಿ ತಲುಪಿವೆ. ಈ ಹಿನ್ನೆಲೆಯಲ್ಲಿ ಈ ಯೋಜನೆಯ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಅನುದಾನ ಮಂಜೂರು ಮಾಡಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಬಿಜೆಪಿ ಜಿಲ್ಲಾಧ್ಯಕ್ಷ ಮುರಳಿ, ತಾಲೂಕು ಅಧ್ಯಕ್ಷ ವಿಶ್ವನಾಥ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts