ಹಿರಿಯೂರು: ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ತಾಲೂಕು ಕಚೇರಿ ಬಳಿ ಮಂಗಳವಾರ ಅಹೋರಾತ್ರಿ ಧರಣಿ ಆರಂಭಿಸಿದರು.
ಸೇನೆಯ ತಾಲೂಕಾಧ್ಯಕ್ಷ ಶಿವಕುಮಾರ್ ಮಾತನಾಡಿ, ಸದಾಶಿವ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಸಿ 8 ವರ್ಷ ಕಳೆದರೂ ಜಾರಿಯಾಗಿಲ್ಲ. ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸರ್ಕಾರಗಳು ವರದಿ ಜಾರಿಗೊಳಿಸಲು ವಿಫಲವಾಗಿವೆ ಎಂದು ದೂರಿದರು. ಮುಖಂಡರಾದ ಸಿಕಂದರ್, ನರಸಿಂಹಸ್ವಾಮಿ, ರಾಘವೇಂದ್ರ ಇತರರಿದ್ದರು.