ದಕ್ಷಿಣ ಕಾಶಿಯಲ್ಲಿ ಸಂಭ್ರಮದ ಕರ್ಪೂರದಾರತಿ

blank

ಹಿರಿಯೂರು: ಇಲ್ಲಿನ ಐತಿಹಾಸಿಕ ಪ್ರಸಿದ್ಧ ತೇರುಮಲ್ಲೇಶ್ವರ ಸ್ವಾಮಿ ದೇಗುಲದಲ್ಲಿ ಬುಧವಾರ ರಾತ್ರಿ ಕರ್ಪೂರದಾರತಿ ಧಾರ್ಮಿಕ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.

blank

ತೇರುಮಲ್ಲೇಶ್ವರ, ಚಂದ್ರಮೌಳೇಶ್ವರ, ಉಮಾಮಹೇಶ್ವರಸ್ವಾಮಿ ರಥಾವರೋಹಣ ಉತ್ಸವದ ನಂತರ, ರಾತ್ರಿ 8ಕ್ಕೆ ದೇವಸ್ಥಾನ ಆವರಣದಲ್ಲಿನ ಎತ್ತರದ ಸ್ತಂಬದ ಮೇಲೆ ಕರ್ಪೂರದ ದೀಪ ಹಚ್ಚಿದ ನಂತರ, ಸ್ತಂಬದ ಬಳಿ ನೆರೆದಿದ್ದ ಭಕ್ತರು ದೇವಸ್ಥಾನದ ಸುತ್ತಲೂ ಕರ್ಪೂರದ ರಾಶಿ ಹಾಕಿ ಬೆಳಗಿಸಿದಾಗ ಇಡೀ ದೇಗುಲ ಬೆಳಕಿನಿಂದ ಝಗಮಗಿಸಿದ್ದು ನೋಡುಗರ ಗಮನ ಸೆಳೆಯಿತು.

ದೀಪ ಸ್ತಂಭ: ಗರ್ಭಗುಡಿ ಮುಂಭಾಗದಲ್ಲಿರುವ 56 ಅಡಿ ಎತ್ತರದ ಸ್ತಂಭ ಮತ್ತು 20 ಅಡಿ ಎತ್ತರದ ಬಸವಣ್ಣ ದೇವರ ಏಕಶಿಲಾ ದೀಪ ಸ್ತಂಬದ ತುದಿಯಲ್ಲಿ ಎಂಟು ಲೋಹದ ದೀಪಗಳಿದ್ದು, ಅವುಗಳಿಗೆ ಎಣ್ಣೆ ಮತ್ತು ಕರ್ಪೂರ ಹಾಕಿ ಶ್ರೀ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಅವುಗಳನ್ನು ಬೆಳಗಿಸಲಾಯಿತು.

ಈ ದೀಪದ ಬೆಳಕು ನಾಲ್ಕೈದು ಕಿ.ಮೀ ದೂರದವರೆಗೆ ಆಕರ್ಷಕವಾಗಿ ಕಂಡುಬಂದಿತು. ತಹಸೀಲ್ದಾರ್ ಸತ್ಯನಾರಾಯಣ, ಜಿಪಂ ಸದಸ್ಯ ಆರ್.ನಾಗೇಂದ್ರನಾಯ್ಕ, ನಗರಸಭೆ ಮಾಜಿ ಅಧ್ಯಕ್ಷ ಟಿ.ಚಂದ್ರಶೇಖರ್, ಈ.ಮಂಜುನಾಥ್, ಜಿ.ಪ್ರೇಮ್‌ಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಎಸ್.ಸಾದತ್ ಉಲ್ಲಾ, ಅರ್ಚಕ ವಿಶ್ವನಾಥಾಚಾರ್, ಆರ್.ಐ.ಲಕ್ಷ್ಮಣ್ಣ, ದೇವಸ್ಥಾನ ಸೇವಾ ಸಮಿತಿ ಸದಸ್ಯರಿದ್ದರು.

Share This Article

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…

ಬೇಸಿಗೆಯಲ್ಲಿ ಪಿತ್ತಕೋಶ ಸಮಸ್ಯೆ ಹೆಚ್ಚಳ

| ಪಂಕಜ ಕೆ.ಎಂ., ಬೆಂಗಳೂರು ಬಿಸಿಲ ಝುಳ ಹೆಚ್ಚಾಗಿದ್ದರೂ ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳುವಲ್ಲಿ ವಿಫಲರಾಗುತ್ತಿರುವ ಜನರು…