ಹಿರಿಯೂರು: ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ತೋಟಗಾರಿಕೆ ಅಧಿಕಾರಿಗಳು ಧಾವಿಸಿರುವುದು ಕೃಷಿಕರಲ್ಲಿ ಸಂತಸ ಮೂಡಿಸಿದೆ.
ತಾಲೂಕಿನ ಬಹುತೇಕ ರೈತರು ತೋಟಗಾರಿಕೆ ಬೆಳೆಗಳಾದ ಪಪ್ಪಾಯ, ದಾಳಿಂಬೆ, ಬಾಳೆ, ಕುಂಬಳ, ಕಲ್ಲಂಗಡಿ, ಕರಬೂಜ ಇತರ ಬೆಳೆ ಬೆಳೆದಿದ್ದು, ಲಾಕ್ಡೌನ್ನಿಂದ ಮಾರಾಟ ಮಾಡಲು ಸಾಧ್ಯವಾಗದೇ ಸಂಕಷ್ಟದಲ್ಲಿದ್ದರು.
ಈ ಸಮಯದಲ್ಲಿ ಸರ್ಕಾರದ ನಿರ್ದೇಶನದಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ನೇರ ಖರೀದಿದಾರರನ್ನು ರೈತರ ಜಮೀನಿಗೆ ಕರೆತಂದು ಉತ್ತಮ ಬೆಲೆಗೆ ಹಣ್ಣುಗಳನ್ನು ಖರೀದಿಸಿ ಅನುಕೂಲ ಮಾಡಿಕೊಟ್ಟಿದ್ದಕ್ಕೆ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದಾರೆ.