More

    ಸಿಎಂ ಬಿಎಸ್‌ವೈಗೆ ಪೂರ್ಣಿಮಾ ಪತ್ರ

    ಹಿರಿಯೂರು: ವಿ.ವಿ.ಸಾಗರ ಜಲಾಶಯದಿಂದ ಚಳ್ಳಕೆರೆಗೆ ಹೆಚ್ಚುವರಿ ನೀರು ಹರಿಸಲು ಆದೇಶ ಹೊರಡಿಸಿದ ನೀರಾವರಿ ಇಲಾಖೆ ಸಚಿವರ ಆದೇಶದ ವಿರುದ್ಧ ಶಾಸಕಿ ಕೆ.ಪೂರ್ಣಿಮಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಪೂರ್ಣಿಮಾ, ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಕಾಂಗ್ರೆಸ್ ಪಕ್ಷದ ಚಳ್ಳಕೆರೆ ಶಾಸಕರ ಮಾತಿಗೆ ಮನ್ನಣೆ ನೀಡಿರುವುದು ದುರದೃಷ್ಟಕರ ಎಂದು ತಿಳಿಸಿದ್ದಾರೆ.

    ಜಿಲ್ಲೆಯಲ್ಲಿನ ಕುಡಿವ ನೀರಿನ ಸಮಸ್ಯೆ, ಭದ್ರಾ ಮೇಲ್ದಂಡೆ ಯೋಜನೆ ಪ್ರಗತಿ, ವಿ.ವಿ.ಸಾಗರ ಜಲಾಶಯದಲ್ಲಿ ಲಭ್ಯವಿರುವ ನೀರಿನ ಬಳಕೆ ಇತರ ವಿಷಯಗಳ ಬಗ್ಗೆ ಜಿಲ್ಲೆಯ ಜನಪ್ರತಿನಿದಿಗಳ ಸಭೆ ಕರೆದು ಚರ್ಚಿಸಿ ತೀರ್ಮಾನ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಗಮನಕ್ಕೆ ತರಲಾಗಿತ್ತು. ಆದರೆ, ಇಲ್ಲಿಯವರೆಗೂ ನಮ್ಮ ಮನವಿಗೆ ಸ್ಪಂದಿಸಿಲ್ಲ. ಜತೆಗೆ ನಮ್ಮನ್ನು ಕಡೆಗಣಿಸಿ, ಏಕಪಕ್ಷೀಯ ನಿರ್ಧಾರ ಕೈಗೊಳ್ಳಲಾಗಿದೆ.

    ಇದರಿಂದ ನಮ್ಮ ಕ್ಷೇತ್ರದ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದ್ದು, ನನ್ನ ಮುಂದಿನ ನಿರ್ಣಯವು ವ್ಯತಿರಿಕ್ತವಾದರೆ, ಅದಕ್ಕೆ ನೀವುಗಳೇ ಕಾರಣವೆಂದು ಪತ್ರದಲ್ಲಿ ಎಚ್ಚರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts