ಹಿರಿಯೂರು: ತಾಲೂಕಿನ ಪಟ್ರೆಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ ಕರೊನಾ ಸೇನಾನಿ ಮಹೇಂದ್ರ ಅಂತ್ಯಕ್ರಿಯೆ ಗ್ರಾಮದಲ್ಲಿ ಭಾನುವಾರ ಜರುಗಿತು.
ಶಿರಾ ತಾಲೂಕಿನ ದೊಡ್ಡ ಅಗ್ರಹಾರ ಸರ್ಕಾರಿ ಆಸ್ಪತ್ರೆಯಲ್ಲಿ ಕಿರಿಯ ಆರೋಗ್ಯ ಸಹಾಯಕರಾಗಿದ್ದರು. ಶಾಸಕಿ ಕೆ.ಪೂರ್ಣಿಮಾ, ಬಿಜೆಪಿ ಮುಖಂಡ ಡಿ.ಟಿ.ಶ್ರೀನಿವಾಸ್, ಜಿಪಂ ಸದಸ್ಯೆ ರಾಜೇಶ್ವರಿ, ನಿರಂಜನಮೂರ್ತಿ ಇತರರು ಅಂತಿಮ ದರ್ಶನ ಪಡೆದರು.