More

    ತಮ್ಮನಿಗೆ ಗುಂಡಿಟ್ಟು ಕೊಂದ ಅಣ್ಣ

    ಗೋಣಿಕೊಪ್ಪ: ಪೊನ್ನಂಪೇಟೆ ತಾಲೂಕು ಬೇಗೂರಿನಲ್ಲಿ ಅಣ್ಣ ತನ್ನ ತಮ್ಮನಿಗೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ.

    ಕಾಂಗ್ರೆಸ್ ಮುಖಂಡ, ಅರ್ವತೋಕ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಂಡ ಪ್ರಕಾಶ್(57) ಕೊಲೆಯಾದವರು.
    ಸಹೋದರ ಸುಬ್ರಮಣಿ ಶನಿವಾರ ಮುಂಜಾನೆ ಬೇಗೂರು ತೋಟದ ಮನೆಯಲ್ಲಿ ಇದ್ದ ಬಂದೂಕಿನಿಂದ ಗುಂಡು ಹೊಡೆದ ಪರಿಣಾಮ ಪ್ರಕಾಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜತೆಯಲ್ಲಿ ಇದ್ದ ಪ್ರಕಾಶ್ ಪುತ್ರ ದ್ಯಾನ್ ಎಂಬಾತನಿಗೆ ಗುಂಡು ತಗಲಿ ಗಾಯಗೊಂಡಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಟುಂಬಿಕ ಕಲಹದಿಂದ ಗುಂಡು ಹಾರಿಸಲಾಗಿದೆ ಎನ್ನಲಾಗಿದೆ. ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts