ಹಿಟಾಚಿ, 3 ಟಿಪ್ಪರ್ ವಶ, 6 ಜನರ ಮೇಲೆ ಪ್ರಕರಣ

ಅಕ್ರಮವಾಗಿ ಮಣ್ಣು ಸಾಗಾಟದಲ್ಲಿ ತೊಡಗಿದ್ದ ಹಿಟಾಚಿ, ಟಿಪ್ಪರ್‌ಗಳನ್ನು ಪೊಲೀಸರು ವಶಪಡಿಸಿಕೊಂಡು ಮುದ್ದೇಬಿಹಾಳ ಪೊಲೀಸ್ ಠಾಣೆ ಆವರಣದಲ್ಲಿ ನಿಲ್ಲಿಸಿರುವುದು.

ಮುದ್ದೇಬಿಹಾಳ: ತಾಲೂಕಿನ ಕೃಷ್ಣಾ ನದಿ ತೀರದ ಅಮರಗೋಳ ಗ್ರಾಮ ವ್ಯಾಪ್ತಿಯಲ್ಲಿ ಸರ್ಕಾರದ ಅನುಮತಿ ಅಥವಾ ರಾಯಲ್ಟಿ ಸಂದಾಯದ ದಾಖಲೆ ಇಲ್ಲದೆ ಕಳ್ಳತನದಿಂದ ಅಕ್ರಮವಾಗಿ ಕಪ್ಪು ಎರೆ ಮಣ್ಣನ್ನು ಮಾರುವ ಉದ್ದೇಶದಿಂದ ಮುಂದಾಗಿದ್ದ ತಂಡದ ಮೇಲೆ ಪಿಎಸ್‌ಐ ಸಂಜಯ್ ತಿಪ್ಪರಡ್ಡಿ ನೇತೃತ್ವದ ತಂಡ ಮಂಗಳವಾರ ದಾಳಿ ನಡೆಸಿ ಮೂರು ಟಿಪ್ಪರ್, ಒಂದು ಹಿಟಾಚಿ ಯಂತ್ರ ವಶಪಡಿಸಿಕೊಂಡಿದೆ.

ಅಲ್ಲದೆ, ಅಕ್ರಮದಲ್ಲಿ ತೊಡಗಿದ್ದ ಮುದ್ದೇಬಿಹಾಳ ತಾಲೂಕು ಢವಳಗಿಯ ರಮೇಶ ಸಂಗಣ್ಣ ಭೀರಗೊಂಡ, ಅರಸನಾಳದ ಮಹೇಶ ಸಿದ್ದಪ್ಪ ಮೂಲಿಮನಿ, ಮಲ್ಲೇಶ ಸಿದ್ದಪ್ಪ ಕೇಸಾಪುರ, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾದ ಮಾಳಿಂಗರಾಯ ಸೋಮಣ್ಣ ಐದುಬಾವಿ, ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕು ಮರಟಗೇರಿಯ ರೇಣುಕಾ ಹಣಮಂತಪ್ಪ ಯರಜೇರಿ, ಹಣಮಂತಪ್ಪ ಯರಜೇರಿ ವಿರುದ್ಧ ಬಿಎನ್‌ಎಸ್ ಕಾಯ್ದೆ 303ರ ಅಡಿಯಲ್ಲಿ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಕ್ರಮ ಮಣ್ಣು ಅಗೆತ, ಸಾಗಾಟ ತಡೆಯುವಂತೆ ಆಗ್ರಹಿಸಿ ತಾಲೂಕು ಆಡಳಿತ ಸೌಧ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣ, ಯುವಜನ ಸೇನೆ ಸಂಘಟನೆ ಪದಾಧಿಕಾರಿಗಳು, ಸದಸ್ಯರು ಕಣ್ಣು, ಕಿವಿ, ಬಾಯಿ ಮುಚ್ಚಿಕೊಂಡ ಮಂಗಗಳ ್ಲೆಕ್ಸ್ ಹಿಡಿದು ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದ್ದಲ್ಲದೆ, ಒಂದು ದಿನದ ಸಾಂಕೇತಿಕ ಧರಣಿ ನಡೆಸಿದ್ದ ಮತ್ತು ಎರಡು ದಿನಗಳ ಹಿಂದೆ ವಿಜಯಪುರ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಆನಂದ ಠಕ್ಕನವರ್ ಅವರು ಅಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತರಾಗಿ ಈ ಕ್ರಮ ಕೈಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

blank
Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…