ಬೆಂಗಳೂರು: ಜೊಮ್ಯಾಟೋ ಫುಡ್ ಡೆಲಿವರಿ ಆ್ಯಪ್ನ ಡೆಲಿವರಿ ಬಾಯ್ ವಿರುದ್ಧ ದೂರು ನೀಡಿ ಸಕತ್ ಸುದ್ದಿಯಲ್ಲಿದ್ದ ಇನ್ಸ್ಟಾಗ್ರಾಂ ಇನ್ಫ್ಲೂಯೆನ್ಸರ್ ಹಿತೇಶಾ ಚಂದ್ರಾಣಿ ಇದೀಗ ಬೆಂಗಳೂರಿನಿಂದ ನಾಪತ್ತೆಯಾಗಿದ್ದಾಳೆ. ಆಕೆಯ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಮನೆಯ ಬಾಗಿಲಿಗೆ ಬೀಗ ಬಿದ್ದಿರುವುದಾಗಿ ಹೇಳಲಾಗಿದೆ.
ಡೆಲಿವರಿ ಬಾಯ್ ಕಾಮರಾಜ್ ತನ್ನ ಮೇಲೆ ಹಲ್ಲೆ ಮಾಡಿದ್ದಾಗಿ ಹಿತೇಶಾ ದೂರು ನೀಡಿದ್ದಳು. ಅದಾದ ನಂತರ ಪ್ರಕರಣ ತಿರುವು ಪಡೆದುಕೊಂಡಿದ್ದು, ಜನರು ಹಿತೇಶಾದ್ದೇ ತಪ್ಪಿದೆ ಎಂದು ಹೇಳಲಾರಂಭಿಸಿದ್ದರು. ಕಾಮರಾಜ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಆಕೆಯ ತನ್ನ ಮೇಲೆ ಹಲ್ಲೆ ಮಾಡಿದ್ದಾಳಿ ಹೇಳಿದ್ದ. ಮಾರ್ಚ್ 15ರಂದು ಆಕೆಯ ವಿರುದ್ಧ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಾಗಿತ್ತು.
ಎಫ್ಐಆರ್ ದಾಖಲಾದ ನಂತರ ಹಿತೇಶಾ ವಿಚಾರಣೆಗೆಂದು ಪೊಲೀಸರು ಅವಳ ಮನೆಗೆ ತೆರಳಿದ್ದಾರೆ. ಆದರೆ ಆ ಸಮಯದಲ್ಲಿ ಮನೆಗೆ ಬೀಗ ಹಾಕಿರುವುದು ಗೊತ್ತಾಗಿದೆ. ಆಕೆ ಬೆಂಗಳೂರು ತೊರೆದಿದ್ದಾಳೆ ಎನ್ನುವ ಮಾಹಿತಿ ಲಭಿಸಿದೆ.
ಆಕೆ ನಮ್ಮೊಂದಿಗೆ ಮಾತನಾಡಿದ್ದಾಳೆ. ಆಕೆಯ ವಿಳಾಸ ನೆಟ್ಟಿಗರಿಗೆ ಸಿಕ್ಕಿದ್ದು, ಅದರಿಂದ ತನಗೆ ತೊಂದರೆ ಆಗಬಹುದು ಎನ್ನುವ ಕಾರಣಕ್ಕೆ ಆಕೆ ಈ ರೀತಿ ಮಾಡಿರಬಹುದು. ಇಂದು ಸ್ಟೇಟ್ಮೆಂಟ್ ಕೊಡುವುದಾಗಿ ಆಕೆ ತಿಳಿಸಿದ್ದಾಳೆ ಎಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
VIDEO| ಮಹಿಳೆಯರ ಒಳಉಡುಪು ಕದ್ದ ಖತರ್ನಾಕ್ಗಳು! ಪ್ಯಾಂಟಿ ಚೋರ್ ಅಬ್ದುಲ್ ವಿಡಿಯೋ ವೈರಲ್
ಅಪ್ಪ ಅಮ್ಮನಿಗೆ ಕನ್ನಡದಲ್ಲೇ ವಿಷ್ ಮಾಡಿದ ಅನುಷ್ಕಾ ಶೆಟ್ಟಿ! ನಿಜವಾದ ಕನ್ನಡ ಪ್ರೇಮವೆಂದರೆ ಇದೇ ಎಂದ ನೆಟ್ಟಿಗರು