blank

ವಸತಿ ರಹಿತಗೆ ಶೀಘ್ರ ಸೂರು

blank

ಹೊಳಲ್ಕೆರೆ: ವಸತಿ ರಹಿತ ಹಾಗೂ ಗುಡಿಸಲಿನಲ್ಲಿ ವಾಸಿಸುವ ಬಡವರಿಗೆ 5 ಲಕ್ಷ ರೂ. ಅನುದಾನದಲ್ಲಿ ಮನೆ ಕಟ್ಟಿಸಿಕೊಡುವ ವಸತಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಕ್ಷೇತ್ರದಲ್ಲಿರುವ ಪ್ರತಿ ವಸತಿ ರಹಿತರಿಗೂ ಸೂರು ದೊರೆಯಲಿದೆ ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.

ತಾಲೂಕಿನ ಗುಂಡೇರಿ ಗ್ರಾಮದಲ್ಲಿ ಶನಿವಾರ ಸಿಸಿ ರಸ್ತೆ, ಸರ್ಕಾರಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.

ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರಿಗೆ ಧನಸಹಾಯ ನೀಡಲು 2 ಲಕ್ಷ ಕೋಟಿ ರೂ. ನೀಡಿದೆ. ಸರ್ಕಾರಕ್ಕೆ ಆರ್ಥಿಕ ಮೂಲಗಳಿಗೆ ಕೊರತೆ ಉಂಟಾಗಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೊಡಲು ಒತ್ತು ನೀಡಿದೆ. ಚಿಕ್ಕಜಾಜೂರಿನಿಂದ ಎಮ್ಮಿಗನೂರು ಕೆರೆಗೆ ನೀರು ತುಂಬಿಸಲು ಸರ್ಕಾರದ ಒತ್ತಡ ಹಾಕಿ 50 ಲಕ್ಷ ರೂ. ಅನುದಾನ ತರಲಾಗಿದೆ ಎಂದು ಹೇಳಿದರು.

ಬಿಜೆಪಿ ಮುಖಂಡ ಜಿ.ಎಂ.ಸುರೇಶ್, ಗ್ರಾಪಂ ಅಧ್ಯಕ್ಷೆ ವನಜಾಕ್ಷಮ್ಮ, ಮಾಜಿ ಅಧ್ಯಕ್ಷ ಗಿರೀಶ್, ಇಂಜಿನಿಯರ್ ಮಹಾಬಲೇಶ್, ತಿಪ್ಪೇಸ್ವಾಮಿ, ಗುತ್ತಿಗೆದಾರ ಮಾರುತೇಶ್, ಕೆ.ಸಿ.ರಮೇಶ್ ಇತರರಿದ್ದರು.

Share This Article

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…

ಕಣ್ಣಿನಪೊರೆ ಸಮಸ್ಯೆಗೆ ಪರಿಹಾರ ಏನೆಂದು ಆಲೋಚಿಸುತ್ತಿದ್ದೀರಾ?; ಇಲ್ಲಿದೆ ಸೂಕ್ತ ಮನೆಮದ್ದಿನ ಮಾಹಿತಿ | Health Tips

ಪ್ರಸ್ತುತ ಕಾರ್ಯನಿರತ ಜೀವನ ಮತ್ತು ಕಳಪೆ ಜೀವನಶೈಲಿಯಿಂದಾಗಿ ಅನೇಕ ಸಮಸ್ಯೆಗಳು ಉದ್ಭವಿಸುತ್ತಿವೆ. ಅದರಲ್ಲಿನ ಪ್ರಮುಖ ಸಮಸ್ಯೆಗಳಲ್ಲಿ…