ಕೆಲಸದ ಒತ್ತಡಕ್ಕೆ ಮುಕ್ತಿ ಕೊಡಿ

blank

ಹೊಳಲ್ಕೆರೆ: ಸರ್ಕಾರಿ ನೌಕರರ ಸಂಘವು ನೌಕರರ ಹಿತ ಕಾಯಲು ಸಿದ್ಧವಿದ್ದು, ಏನೇ ಕುಂದುಕೊರತೆ ಇದ್ದರೂ ಮುಕ್ತವಾಗಿ ಹಂಚಿಕೊಳ್ಳಬೇಕು ಎಂದು ಸಂಘದ ತಾಲೂಕು ಅಧ್ಯಕ್ಷ ಲೋಕೇಶ್ ತಿಳಿಸಿದರು.

ಪಟ್ಟಣದ ಪ್ರಸನ್ನ ಗಣಪತಿ ದೇವಾಲಯದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂಘದ ಸಭೆ ಹಾಗೂ ಪ್ಯಾಕೆಟ್ ಕ್ಯಾಲೆಂಡರ್ ಬಿಡುಗಡೆ ವೇಳೆ ಮಾತನಾಡಿದರು.

ತಮ್ಮದಲ್ಲದ ಕಾರ್ಯಗಳ ಒತ್ತಡ ಹೆಚ್ಚಾಗಿ ವೃತ್ತಿ ನಿಭಾಯಿಸುವುದು ಕಷ್ಟವಾಗಿದೆ. ಮಾನಸಿಕ ಒತ್ತಡದಿಂದ ಅನೇಕರು ನಾನಾ ಕಾಯಿಲೆಗಳಿಗೆ ತುತ್ತಾಗುವಂತಾಗಿದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ನೌಕರರ ಸೇವೆ ದುರುಪಯೋಗಪಡಿಸಿಕೊಳ್ಳದಂತೆ ಸರ್ಕಾರ ಸೂಚಿಸಬೇಕು ಎಂದು ಆಗ್ರಹಿಸಿದರು.

ಕಸಾಪ ಮಾಜಿ ಅಧ್ಯಕ್ಷ ಎಂ.ಜಿ.ವೆಂಕಟೇಶ್, ಸಂಘದ ಪ್ರ.ಕಾರ್ಯದರ್ಶಿ ತಿಪ್ಪೇಶಪ್ಪ, ಉಪಾಧ್ಯಕ್ಷ ಕೆ.ಎಸ್.ಜಯಕುಮಾರ್, ಖಜಾಂಚಿ ಆರ್.ಅಜ್ಜಪ್ಪ, ಕಾರ್ಯಾಧ್ಯಕ್ಷ ಚಂದ್ರಶೇಖರನಾಯ್ಕ, ರವಿಕುಮಾರ್, ಸಿ.ಆರ್.ರಾಜು, ಜಂಟಿ ಕಾರ್ಯದರ್ಶಿ ಆರ್. ಪ್ರಸನ್ನ, ಕೆ.ಲತಾ, ನಿಜಲಿಂಗಪ್ಪ, ಸದಾಶಿವಪ್ಪ, ರಾಜ್ಯ ಸದಸ್ಯ ಎನ್.ಶಿವಮೂರ್ತಿ ಮತ್ತಿತರರಿದ್ದರು.

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…