ಬೆಂಗಳೂರು: ಕರೋನಾ ವೈರಸ್ Covid19 ಸೋಂಕು ಸಾಂಕ್ರಾಮಿಕವಾಗಿ ಹರಡುತ್ತಿರುವ ಕಾರಣ ರಾಜ್ಯ ಸರ್ಕಾರ ಇದನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿದ್ದು, ಮುಂದಿನ ಒಂದು ವಾರದ ಅವಧಿಗೆ ಕರ್ನಾಟಕ ಬಂದ್ ಮಾಡುವಂತೆ ಸೂಚಿಸಿದೆ.
ಸೋಂಕು ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಇಲಾಖೆ ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಿಗೆ ಮಾರ್ಚ್ 14ರಿಂದ 28ರ ತನಕ ರಜೆ ಘೋಷಿಸಿರುವುದಾಗಿ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಕಳುಹಿಸಿದ್ದಾರೆ.
ಆದಾಗ್ಯೂ, ಈ ಕಾಲೇಜುಗಳಲ್ಲಿ ಕಚೇರಿ ಕೆಲಸ ಕಾರ್ಯಗಳು ಎಂದಿನಂತೆಯೇ ಮುಂದುವರಿಯಲಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ಒಂದು ವಾರ ಕರ್ನಾಟಕ ಬಂದ್: ಏನು ಇರುತ್ತೆ, ಏನಿರಲ್ಲ ಇಲ್ಲಿದೆ ಮಾಹಿತಿ..