ಮಂಗಳೂರು: ಭಾರಿ ಮಳೆ, ಭೂಕುಸಿತ ಹಿನ್ನೆಲೆಯಲ್ಲಿ ಸೇತುವೆ, ರಸ್ತೆ ಮೊದಲಾದ ಸಂಪರ್ಕ ವ್ಯವಸ್ಥೆಗಳು ಕೆಟ್ಟುಹೋಗಿರುವ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ (ಆಗಸ್ಟ್ 4) ದ.ಕ.ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಿದ್ದಾಗಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.