More

    ಸೋಲಿನ ನಡುವೆಯೇ ಟೀಂ ಇಂಡಿಯಾಗೆ ಶಾಕ್​; ಎನ್​ಸಿಎ ಸೇರಿದ ಸ್ಟಾರ್​ ಆಲ್ರೌಂಡರ್​

    ಬೆಂಗಳೂರು: ಪ್ರವಾಸಿ ಇಂಗ್ಲೆಂಡ್​ ತಂಡದ ವಿರುದ್ಧ ಮೊದಲ ಟೆಸ್ಟ್​ ಪಂದ್ಯದ ಸೋಲಿನ ಆಘಾತದ ನಡುವೆಯೇ ಟೀಂ ಇಂಡಿಯಾಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತಂಡದಿಂದ ಸ್ಟಾರ್​ ಆಟಗಾರರೊಬ್ಬರು ಹೊರಬಿದ್ದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಭಾಧಿಸುತ್ತಿದ್ದು, ಇದೀಗ ಮತ್ತೋರ್ವ ಆಟಗಾರ ಗಾಯಕ್ಕೆ ತುತ್ತಾಗಿದ್ದಾರೆ.

    ಟೀಂ ಇಂಡಿಯಾದ ಸ್ಟಾರ್​ ಆಲ್ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದಾಗಿ ಪುನಶ್ಚೇತನಕ್ಕಾಗಿ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ ಸೇರಿಕೊಂಡಿದ್ದಾರೆ. ಈ ಕುರಿತು ಸ್ವತಃ ರವೀಂದ್ರ ಜಡೇಜಾ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

    NCA

    ಇದನ್ನೂ ಓದಿ: 180 ಸಿನಿಮಾಗಳು ಫ್ಲಾಪ್ ಆದರೂ, 400 ಕೋಟಿ ರೂ. ಒಡೆಯ ಈ ನಟ

     ಮೊದಲ ಪಂದ್ಯದ ಎರಡನೇ ಇನಿಂಗ್ಸ್​ನಲ್ಲಿ ರನ್​ ಕಸಿಯುವ ಯತ್ನದಲ್ಲಿ ರವೀಂದ್ರ ಜಡೇಜಾ ಮಂಡಿರಜ್ಜು ಗಾಯದ ಸಮಸ್ಯೆಗೆ ತುತ್ತಾಗಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿ ಇರಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಗಾಯಗೊಂಡಿರುವ ಕಾರಣ ರವೀಂದ್ರ ಜಡೇಜಾ ಎರಡನೇ ಟೆಸ್ಟ್​ ಪಂದ್ಯದಿಂದ ಹೊರಬಿದ್ದಿದ್ದು, ಫಿಟ್​ನೆಸ್​ ಟೆಸ್ಟ್​ನಲ್ಲಿ ಉತ್ತೀರ್ಣರಾದ ಬಳಿಕ ಟೀಂ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಮೊದಲ ಟೆಸ್ಟ್​ ಪಂದ್ಯದಲ್ಲಿ ರವೀಂದ್ರ ಜಡೇಜಾ ಐದು ವಿಕೆಟ್​ಗಳನ್ನು ಪಡೆದು, 89 ರನ್​ ಗಳಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts