ಬೆಂಗಳೂರು: ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಸೋಲಿನ ಆಘಾತದ ನಡುವೆಯೇ ಟೀಂ ಇಂಡಿಯಾಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತಂಡದಿಂದ ಸ್ಟಾರ್ ಆಟಗಾರರೊಬ್ಬರು ಹೊರಬಿದ್ದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಭಾಧಿಸುತ್ತಿದ್ದು, ಇದೀಗ ಮತ್ತೋರ್ವ ಆಟಗಾರ ಗಾಯಕ್ಕೆ ತುತ್ತಾಗಿದ್ದಾರೆ.
ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದಾಗಿ ಪುನಶ್ಚೇತನಕ್ಕಾಗಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಸೇರಿಕೊಂಡಿದ್ದಾರೆ. ಈ ಕುರಿತು ಸ್ವತಃ ರವೀಂದ್ರ ಜಡೇಜಾ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: 180 ಸಿನಿಮಾಗಳು ಫ್ಲಾಪ್ ಆದರೂ, 400 ಕೋಟಿ ರೂ. ಒಡೆಯ ಈ ನಟ
ಮೊದಲ ಪಂದ್ಯದ ಎರಡನೇ ಇನಿಂಗ್ಸ್ನಲ್ಲಿ ರನ್ ಕಸಿಯುವ ಯತ್ನದಲ್ಲಿ ರವೀಂದ್ರ ಜಡೇಜಾ ಮಂಡಿರಜ್ಜು ಗಾಯದ ಸಮಸ್ಯೆಗೆ ತುತ್ತಾಗಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿ ಇರಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಗೊಂಡಿರುವ ಕಾರಣ ರವೀಂದ್ರ ಜಡೇಜಾ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದು, ಫಿಟ್ನೆಸ್ ಟೆಸ್ಟ್ನಲ್ಲಿ ಉತ್ತೀರ್ಣರಾದ ಬಳಿಕ ಟೀಂ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಐದು ವಿಕೆಟ್ಗಳನ್ನು ಪಡೆದು, 89 ರನ್ ಗಳಿಸಿದ್ದರು.