ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆಯ ಯಾರ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ. ಬದಲಿಗೆ ಪೌರತ್ವ ಕೊಡುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದರು.
ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಪೌರತ್ವ ಕಾಯ್ದೆ ವಿರೋಧಿಸುವವರು ದಲಿತ ವಿರೋಧಿಗಳು. ಕಾಯ್ದೆ ಯಾರ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ. ಪೌರತ್ವ ಕಸಿದುಕೊಳ್ಳುವ ಯಾವುದೇ ಅಂಶ ಕಾಯ್ದೆಯಲ್ಲಿ ಇಲ್ಲ ಎಂದರು.
ಕಾಂಗ್ರೆಸ್ ಮತಕ್ಕಾಗಿ ದೇಶವನ್ನು ಧರ್ಮದ ಮೇಲೆ ವಿಭಜಿಸಿದೆ. ಮತಕ್ಕಾಗಿ ವಿಭಜನೆಯಾದ ದೇಶವನ್ನು ಪ್ರಧಾನಿ ಮೋದಿ ಒಂದುಗೂಡಿಸುತ್ತಿದ್ದಾರೆ. ಇದನ್ನು ರಾಹುಲ್ ಗಾಂಧಿ ಅರ್ಥ ಮಾಡಿಕೊಳ್ಳಬೇಕು ಎಂದರು.
ಭಾರತೀಯರು 70 ವರ್ಷಗಳಿಂದ ಎಲ್ಲ ಧರ್ಮವನ್ನು ಗೌರವಿಸುತ್ತಿದ್ದಾರೆ. ಅಲ್ಲದೆ ಅನ್ಯ ಧರ್ಮದವದೊಂದಿಗೆ ಸಹಬಾಳ್ವೆ ಜೀವನ ನಡೆಸುತ್ತಿದ್ದಾರೆ. ಆದರೆ ನೆರೆ ರಾಷ್ಟ್ರಗಳಾದ ಪಾಕಿಸ್ತಾನದಲ್ಲಿ ಈ ಸ್ಥಿತಿ ಇಲ್ಲ. ಅಲ್ಲಿ ಧಾರ್ಮಿಕ ಅಲ್ಪ ಸಂಖ್ಯಾತರು ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಪಾಕಿಸ್ತಾನದಲ್ಲಿ ಶೇ.30 ಇದ್ದ ಹಿಂದುಗಳು ಈಗ ಕೇವಲ ಶೇ.3ಕ್ಕೆ ಇಳಿದಿದ್ದಾರೆ ಎಂದರು. (ದಿಗ್ವಿಜಯ ನ್ಯೂಸ್)