More

    ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

    ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಈಗ ಹೇಳಿಕೆ ಬದಲಿಸಿದ್ದಾರೆ.

    ಬೊಮ್ಮಾಯಿ ಹೇಳಿಕೆ ವಿರುದ್ಧ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಎಚ್ಚೆತ್ತುಕೊಂಡ ಸಚಿವರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ. ತನಿಖೆ ನಡೆಯುತ್ತಿದ್ದು ನಂತರ ಸತ್ಯ ತಿಳಯಲಿದೆ ಎಂದು ಮಾತು ಬದಲಿಸಿದರು.

    ಬಾಂಬ್ ಇಟ್ಟ ಯುವಕನ ಹಿನ್ನೆಲೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಲಾಗುತ್ತಿದ್ದಾರೆ. ಬಾಂಬ್ ಸಿಕ್ಕ ತಕ್ಷಣ ತನಿಖೆಗೆ ಮೂರು ತಂಡಗಳನ್ನ ರಚನೆ ಮಾಡಲಾಗಿದೆ. ಆದಿತ್ಯರಾವ್​ ಮನೆಯವರು ಹಲವಾರು ವಿಚಾರಗಳನ್ನ ಆತನ ಬಗ್ಗೆ ಹೇಳಿದ್ದಾರೆ. ಆರೋಪಿ ಮಾನಸಿಕ ಅಸ್ವಸ್ಥ ಎಂದು ಎಲ್ಲಿಯೂ ನಾನು ಹೇಳಿಲ್ಲ, ತನಿಖೆ ಆಗದ ಹೊರತು ನಿಖರವಾಗಿ ಏನೂ ಹೇಳುವುದಿಲ್ಲ ಎಂದರು.

    ವಿಧಿ ವಿಜ್ಞಾನ ತಜ್ಞರಾದ ಎಚ್​ಡಿಕೆ: ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ಪ್ರಕರಣ ಕುರಿತು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರು ವಿಧಿ ವಿಜ್ಞಾನ ತಜ್ಞರಂತೆ ಮಾತನಾಡುತ್ತಿದ್ದಾರೆ. ಇದು ಸರಿಯಲ್ಲ. ತನಿಖೆಯಿಂದ ಸತ್ಯ ಹೊರ ಬರಬೇಕು. ಸಮಗ್ರ ತನಿಖೆ ನಂತರ ಆರೋಪಿಯೊಂದಿಗೆ ಯಾರು ಇದ್ದಾರೆ ಎನ್ನುವುದು ತಿಳಿಯುತ್ತದೆ ಎಂದರು.

    ಪ್ರಕರಣದ ಬಗ್ಗೆ ಎಚ್​ಡಿಕೆ ಅವರು ತೀವ್ರ ಗತಿಯಲ್ಲಿ ಹೇಳಿಕೆ ಕೊಡುತ್ತಿದ್ದಾರೆ. ಅಲ್ಪ ಸಂಖ್ಯಾತರನ್ನು ಓಲೈಕೆ ಮಾಡಲು ಅವರು ಕಾಂಗ್ರೆಸ್​ ಜೊತೆ ಪೈಪೋಟಿಗೆ ಇಳಿದಿದ್ದಾರೆ. ಹೀಗಾಗಿ ಪೊಲೀಸರ ಕೆಲಸವನ್ನು ಅನುಮಾನದಿಂದ ನೋಡುತ್ತಿದ್ದಾರೆ. ಮಂಗಳೂರಿನಲ್ಲಿರುವ ಪೊಲೀಸರು ಕುಮಾರಸ್ವಾಮಿ ಅವಧಿಯಲ್ಲಿ ನೇಮಕಗೊಂಡವರು ಎಂದು ಸಚಿವರು ಹೇಳಿದರು. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts