ಜೈಪುರ: ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಎರಡು ಬಣಗಳಾಗಿದೆ. ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಬಣಗಳು ಹೋಟೆಲ್ ಸೇರಿವೆ. ಬಿಜೆಪಿ ಶಾಸಕರ ಕುದುರೆ ವ್ಯಾಪಾರ ಮಾಡಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದರೆ, ಇತ್ತ ಕಾಂಗ್ರೆಸ್ ಸರ್ಕಾರ ಬಿಜೆಪಿ ಮುಖಂಡರ, ಶಾಸಕರ ಫೋನ್ ಟ್ಯಾಪಿಂಗ್ ಮಾಡುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಬಿಜೆಪಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡರು ಅದಕ್ಕೆ ಪುಷ್ಟಿ ನೀಡುವಂತಹ ಎರಡು ಆಡಿಯೋ ಕ್ಲಿಪ್ಗಳನ್ನು ಕೂಡ ಬಿಡುಗಡೆ ಮಾಡಿದ್ದಾರೆ.
ಇದೀಗ ಕೇಂದ್ರ ಗೃಹ ಸಚಿವಾಲಯ ಈ ಬಗ್ಗೆ ಸಂಪೂರ್ಣ ವರದಿ ಕೇಳಿದೆ. ಫೋನ್ ಟ್ಯಾಪಿಂಗ್ ಬಗ್ಗೆ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ತಿಳಿಸಿದೆ. ಆಡಿಯೋ ಕ್ಲಿಪ್, ಎಫ್ಐಆರ್ ಎಲ್ಲದರ ಬಗ್ಗೆಯೂ ಸಮಗ್ರ ವಿವರಣೆ ನೀಡಲು ಸೂಚಿಸಿದೆ.
ಈ ಎರಡು ಆಡಿಯೋ ಕ್ಲಿಪ್ ಹೊರಬೀಳುತ್ತಿದ್ದಂತೆ ಶಾಸಕರಾದ ಬನ್ವರ್ಲಾಲ್ ಶರ್ಮಾ ಮತ್ತು ವಿಶ್ವೇಂದ್ರ ಸಿಂಗ್ ಎಂಬುವರನ್ನು ಕಾಂಗ್ರೆಸ್, ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟನೆ ಮಾಡಿದೆ. ಈ ಇಬ್ಬರು ಶಾಸಕರು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಸೇರಿ, ಅಶೋಕ್ ಗೆಹ್ಲೊಟ್ ಸರ್ಕಾರ ಉರುಳಿಸುವ ಬಗ್ಗೆ ಮಾತನಾಡಿದ್ದು, ಆಡಿಯೋ ಕ್ಲಿಪ್ನಿಂದ ಬೆಳಕಿಗೆ ಬಂದಿದೆ. ಹೀಗಾಗಿ ಅವರನ್ನು ಪಕ್ಷದಿಂದ ಉಚ್ಚಾಟನೆ ಗೊಳಿಸಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಇದನ್ನೂ ಓದಿ: ಭಾರತದ ಆಗಸದಲ್ಲಿ ಇಂದು ರಾತ್ರಿ ಖಗೋಳ ಚಮತ್ಕಾರ; ಒಂದೇ ಗೆರೆಯಲ್ಲಿ ಚಂದ್ರ ಮತ್ತಿತರ ಐದು ಗ್ರಹಗಳ ದರ್ಶನ
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗಜೇಂದ್ರ ಸಿಂಗ್ ಶೇಖಾವತ್ ಅವರು, ಆಡಿಯೋ ಕ್ಲಿಪ್ನಲ್ಲಿರುವ ಧ್ವನಿ ತನ್ನದಲ್ಲ. ಈ ಬಗ್ಗೆ ತನಿಖೆಯಾಗಲೇಬೇಕು ಎಂದು ಆಗ್ರಹಿಸಿದ್ದಾರೆ.
ಹಾಗೇ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಬಿಜೆಪಿ ಮುಖಂಡರ ಫೋನ್ ಟ್ಯಾಪಿಂಗ್ ಮಾಡುತ್ತಿದೆ. ಈ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ಮುಖಂಡರು ಬಲವಾಗಿ ಪಟ್ಟು ಹಿಡಿದಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಗೃಹ ಸಚಿವಾಲಯ ವರದಿ ಕೇಳಿದೆ. (ಏಜೆನ್ಸೀಸ್)
ಕೋವಿಡ್-19ರಿಂದ ಗುಣಮುಖರಾಗುವಂತೆ ಹಾರೈಸಿ ಐಶ್ವರ್ಯ ರೈ ಫೋಟೋ ಶೇರ್ ಮಾಡಿದ ಡಬ್ಲ್ಯುಡಬ್ಲ್ಯುಇ ದಿಗ್ಗಜ