More

    ಹೇಳೋರು ಕೇಳೋರು ಯಾರೂ ಇಲ್ಲ ಎಂದು ಥಳಿಸಿದ ಸ್ಥಳೀಯರು!

    ಆನೇಕಲ್: ಸ್ಥಳೀಯರು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದು ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ.

    ಕುಟುಂಬವೊಂದು ವ್ಯಕ್ತಿಯನ್ನ ಹಿಡಿದು ಮನಬಂದಂತೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಆನೇಕಲ್ ತಾಲ್ಲೂಕಿನ ತಮ್ಮನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಲೋಕೇಶ್ ಎನ್ನುವಾತ ಹಲ್ಲೆಗೊಳಗಾದ ವ್ಯಕ್ತಿ.

    ನಾರಾಯಣಪ್ಪ ಎಂಬುವವರು ಲೋಕೇಶ್ ಮೇಲೆ ಹಲ್ಲೆ ಮಾಡಿದ್ದು ಮನಬಂದಂತೆ ಥಳಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ನಾರಾಯಣಪ್ಪ ಹಾಗೂ ಲೋಕೇಶ್ ನಡುವೆ ಗಲಾಟೆ ನಡೆದಿದ್ದು ಈ ವೇಳೆ ನಾರಾಯಣಪ್ಪ ಹಾಗೂ ಅವರ ಕುಟುಂಬದವರು ಲೋಕೇಶ್ ಮೇಲೆ ಹಲ್ಲೆ ಮಾಡಿದ್ದಾರೆ.

    ಹಲ್ಲೆಗೊಳಗಾದ ಲೋಕೇಶ್​, ಕುಸಿದು ಬಿದ್ದ ಮನೆಯೊಂದರಲ್ಲಿ ಜೀವನ ನಡೆಸುತ್ತಿದ್ದಾರೆ. ಅವರ ಹೆಂಡತಿ ಮಕ್ಕಳು ಅವರನ್ನು ಬಿಟ್ಟು ಹೋಗಿದ್ದು ಹೇಳುವವರು ಕೇಳುವವರು ಯಾರೂ ಇಲ್ಲ. ವಿಡಿಯೋದಲ್ಲಿ ಲೋಕೇಶ್​, ತಮ್ಮ ಮನೆಯ ಮುಂದೆ ನಿತ್ಯವೂ ಅಕ್ಕಪಕ್ಕದ ಮನೆಯವರು ಕಸ ಹಾಕುತ್ತಿರುವ ಬಗ್ಗೆ ದೂರಿದ್ದಾರೆ. ನೇಕಲ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts