More

    ನೌಕರರ ಪ್ರಾಮಾಣಿಕತೆಯೇ ಸರ್ಕಾರಕ್ಕೆ ಆಧಾರಸ್ತಂಭ

    ಹೊಸನಗರ: ಸರ್ಕಾರಿ ನೌಕರರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದಲ್ಲಿ ಮಾತ್ರ ಸರ್ಕಾರ ಸುಸ್ಥಿತಿಯಲ್ಲಿ ಸಾಗಲು ಸಾಧ್ಯ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

    ಪಟ್ಟಣದ ಈಡಿಗರ ಸಭಾಭವನದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಸರ್ಕಾರಿ ನೌಕರರ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಸರ್ಕಾರದ ಒಂದು ಅಂಗವೇ ಸರ್ಕಾರಿ ನೌಕರರು. ಅವರೆಲ್ಲರು ಅಭಿವೃದ್ಧಿ ಪರ ಚಿಂತನೆ ನಡೆಸಿ ಕೆಲಸ ಮಾಡಿದ್ದಲ್ಲಿ ಮಾತ್ರ ಸರ್ಕಾರ ಅಭಿವೃದ್ಧಿ ಪಥದಲ್ಲಿ ಸಾಗಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
    ಗುರುಭವನ ಕಟ್ಟಡವು ದುಸ್ಥಿತಿಯಲ್ಲಿದೆ. ಸಂಪೂರ್ಣ ಬಿದ್ದು ಹೋಗುವ ಸ್ಥಿತಿಯಲ್ಲಿದೆ. ಇದರ ಮರು ನಿರ್ಮಾಣ ಕೆಲಸ ತುರ್ತಾಗಿ ಆಗಬೇಕಿದೆ. ಈ ಕುರಿತು ಶಿಕ್ಷಕರ ಸಂಘ ಮನವಿ ಮಾಡಿದ್ದು, ಮನವಿಯನ್ನು ಸರ್ಕಾರದ ಮುಂದಿಟ್ಟು ಅಗತ್ಯ ಅನುದಾನ ಮಂಜೂರು ಮಾಡುವಲ್ಲಿ ಕೈಮೀರಿ ಕೆಲಸ ಮಾಡುತ್ತೇನೆ ಎಂದರು.
    ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಮಾತನಾಡಿ, ಸರ್ಕಾರಿ ನೌಕರರ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಬಗೆಹರಿಸಲು ಸಂಘ ಶಕ್ತಿಮೀರಿ ಕೆಲಸ ಮಾಡುತ್ತಿದೆ. ನೌಕರರ ವಿವಿಧ ಬೇಡಿಕೆಗಳು ಈಡೇರುವ ಎಲ್ಲಾ ಲಕ್ಷಣಗಳು ಇದೆ ಎಂದರು.
    ಸಮ್ಮೇಳನದಲ್ಲಿ ಪ್ರಜಾಸ್ನೇಹಿ ಆಡಳಿತ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ, ವಿಜೇತ ನೌಕರರಿಗೆ ಬಹುಮಾನ ವಿತರಣೆ ನಡೆಯಿತು. ನಂತರ ಸರ್ವ ಸದಸ್ಯರ ಮಹಾಸಭೆಯು ನಡೆಯಿತು.
    ತಾಲೂಕು ನೌಕರರ ಸಂಘದ ಅಧ್ಯಕ್ಷ ಎಂ.ಬಸವಣ್ಯಪ್ಪ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ರಶ್ಮಿ ಹಾಲೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಕೃಷ್ಣಮೂರ್ತಿ, ಇಒ ನರೇಂದ್ರಕುಮಾರ್, ಶಿಕ್ಷಕರ ಸಂಘದ ಎಚ್.ಆರ್.ಸುರೇಶ್, ಅಕ್ಷರ ದಾಸೋಹ ಇಲಾಖೆ ನಿರ್ದೇಶಕ ನಾಗರಾಜ್, ಸಂಕೂರು ಹಾಲಪ್ಪ, ಗುರುಮೂರ್ತಿ, ಕೃಷ್ಣಮೂರ್ತಿ, ಪ್ರಭಾಕರ್, ಮಾಲತೇಶ್ ಇದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸ್ವಾಮಿ ಸ್ವಾಗತಿಸಿದರು. ಶಿಕ್ಷಕರಾದ ರೇಖಾ ಪ್ರಭಾಕರ್, ಪ್ರದೀಪ್ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts