ಆನೇಕಲ್: ಇನ್ಸ್ಟಾಗ್ರಾಂ ಮೂಲಕ ಯುವಕನಿಗೆ ಗಾಳ ಹಾಕಿ ಹನಿಟ್ರ್ಯಾಪ್ ಬಲೆಗೆ ಬೀಳಿಸಿ, ಸುಲಿಗೆ ಮಾಡಿದ್ದ ಆರೋಪಿಗಳನ್ನು ಬನ್ನೇರುಘಟ್ಟ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಯುವತಿಯೊಬ್ಬಳು ಇನ್ಸ್ಟಾಗ್ರಾಂನಲ್ಲಿ ಶಶಾಂಕ್ ಎಂಬುವವರಿಗೆ ಪದೇ ಪದೆ ಮೆಸೇಜ್ ಮಾಡುತ್ತಿದ್ದಳು. ಪರಿಚಯ ಮಾಡಿಕೊಂಡ ಬಳಿಕ ಆಮಿಷವೊಡ್ಡಿ ಶಶಾಂಕ್ರನ್ನು ಬನ್ನೇರುಘಟ್ಟ ಸಮೀಪದ ಬಂಡೆಯೊಂದರ ಬಳಿ ಕರೆಸಿಕೊಂಡಿದ್ದಳು. ಇದೇ ವೇಳೆ ಉಳಿದ ಆರೋಪಿಗಳು ಸ್ಥಳಕ್ಕೆ ಎಂಟ್ರಿ ಕೊಟ್ಟಿದ್ದರು.
ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪಗೆ ಲೋಕಾಯುಕ್ತ ಅಧಿಕಾರಿಗಳ ಡ್ರಿಲ್! ಉತ್ತರಿಸಲು ತಡಬಡಾಯಿಸುತ್ತಿರುವ ಶಾಸಕ
ಒಬ್ಬಂಟಿ ಹುಡುಗಿ ಜತೆ ಏನು ಮಾಡುತ್ತಿದ್ದೀಯ ಎಂದು ಅವಾಜ್ ಹಾಕಿದ ಆರೋಪಿಗಳು ದೊಣ್ಣೆಯಿಂದ ಹಲ್ಲೆ ನಡೆಸಿ, ಶಶಾಂಕ್ ಬಳಿ ಇದ್ದ ಐಪೋನ್ ಮತ್ತು ಚಿನ್ನಾಭರಣವನ್ನು ಕಳವು ಮಾಡಿದ್ದರು. ವೃತ್ತಿಯಲ್ಲಿ ಪೌರೋಹಿತ್ಯ ಮಾಡುತ್ತಿದ್ದ ಶಶಾಂಕ್, ಮರ್ಯಾದೆಗೆ ಅಂಜಿ ದೂರು ನೀಡುವುದಿಲ್ಲ ಅಂತ ಆರೋಪಿಗಳು ಭಾವಿಸಿದ್ದರು. ಆದರೆ, ವಂಚನೆ ಬಗ್ಗೆ ಬನ್ನೇರುಘಟ್ಟ ಪೊಲೀಸರಿಗೆ ಶಶಾಂಕ್ ದೂರು ನೀಡಿದ್ದರು.
ದೂರು ಆಧರಿಸಿ ತನಿಖೆಗೆ ಇಳಿದ ಬನ್ನೇರುಘಟ್ಟದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ರುತೀಕ್ ಅಲಿಯಾಸ್ ವಿಷ್ಣು, ಮಹಮದ್ ಆಸೀಫ್, ಯಾಸೀನ್ ಪಾಷಾ, ಸಮೀರ್ ಮತ್ತು ಶಾಹಿದ್ ಅಲಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ನ್ಯಾಯದೇವತೆ: ಹೆಂಡತಿಯ ಸ್ವಯಾರ್ಜಿತ ಆಸ್ತಿಯಲ್ಲಿ ಆಕೆ ಬದುಕಿರುವಾಗ ಗಂಡನಿಗೆ ಹಕ್ಕು ಇರುತ್ತದೆಯೇ?
ಹನಿಟ್ರ್ಯಾಪ್ನಲ್ಲಿ ಪ್ರಮುಖ ಪಾತ್ರ ವಹಿಸಿದ್ದವಳು ಯುವತಿ ಎನ್ನಲಾಗಿತ್ತು. ಆದರೆ, ಬಂಧಿಸಿದಾಗಲೇ ಆಕೆ ಅಪ್ರಾಪ್ತೆ ಎಂದು ತಿಳಿದುಬಂದಿದೆ. ಆಕೆಯನ್ನು ಬಾಲಾಪರಾಧಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಐಪಿಸಿ 397 ಅಡಿಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿ, ಜೈಲಿಗಟ್ಟಲಾಗಿದೆ. (ದಿಗ್ವಿಜಯ ನ್ಯೂಸ್)
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ: ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ
ಹಾವು ಕಚ್ಚಿದರೂ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಹಾಜರಾದ ವಿದ್ಯಾರ್ಥಿನಿ! ಮುಂದೇನಾಯ್ತು?