More

    ಆಂಬುಲೆನ್ಸ್‌ನಲ್ಲೇ ಶಾಸಕರನ್ನು ಭೇಟಿಯಾದ ಬೆಸ್ಕಾಂ ನೌಕರ

    ಹೊನ್ನಾಳಿ: ಅಪಘಾತದಿಂದ ಗಾಯಗೊಂಡು ನಾಲ್ಕೂವರೆ ವರ್ಷದಿಂದ ಹಾಸಿಗೆ ಹಿಡಿದಿರುವ ಬೆಸ್ಕಾಂ ನೌಕರನ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಸೂಚಿಸಿದರು.

    ತನಗೆ ವೇತನ ಬಿಡುಗಡೆ ಮಾಡಿಸುವಂತೆ ಕೋರಿ ಶನಿವಾರ ಆಂಬುಲೆನ್ಸ್‌ನಲ್ಲಿ ಆಗಮಿಸಿದ್ದ ಬೆಸ್ಕಾಂ ನೌಕರ ತಿಪ್ಪೇಶ್ ಅವರ ಆರೋಗ್ಯ ವಿಚಾರಿಸಿ ಸ್ಥಳದಲ್ಲೇ ವೈಯಕ್ತಿಕ ಪರಿಹಾರ ನೀಡಿದ ಶಾಸಕರು, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಕರೆ ಮಾಡಿದರು. ವೇತನ ನೀಡದಿದ್ದಕ್ಕೆ ನಿಮ್ಮ ಇಲಾಖೆ ನೌಕರನ ಜೀವನ ನಿರ್ವಹಣೆ ಕಷ್ಟವಾಗಿದೆ. ಕೂಡಲೇ ಆತನಿಗೆ ವೇತನ ನೀಡಿ ಎಂದು ಸೂಚಿಸಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಯು ಈ ಬಗ್ಗೆ ಅಧಿಕಾರಿಗಳ ಬಳಿ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಶಾಸಕರು ಹೇಳಿದರು.

    ಇದೇ ವೇಳೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದ ಪೂಜಾ ಎಂಬ ಯುವತಿ ಬಿಎಸ್ಸಿ ನರ್ಸಿಂಗ್ ಓದುತ್ತಿರುವ ತನಗೆ ಆರ್ಥಿಕ ಸಮಸ್ಯೆಯಿಂದ ಅಭ್ಯಾಸ ಮುಂದುವರಿಸಲು ತೊಂದರೆಯಾಗಿದೆ ಎಂದು ಹೇಳಿಕೊಂಡಾಗ ಆಕೆಗೆ ಶಾಸಕರು ವೈಯಕ್ತಿಕವಾಗಿ ಧನ ಸಹಾಯ ಮಾಡಿದರು.

    ಜಿಪಂ ಅಧ್ಯಕ್ಷೆ ದೀಪಾ ಜಗದೀಶ್, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts