ಹೊನ್ನಾಳಿ: ಹೊನ್ನಾಳಿಯಲ್ಲಿ ಕೂಡ ಕರ್ನಾಟಕ ಬಂದ್ ಪ್ರತಿಭಟನೆ ಸೀಮಿತವಾಯಿತು. ಸಾರ್ವಜನಿಕರು ಬಂದ್ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದರು. ಬಸ್ಗಳು ಎಂದಿನಂತೆ ಸಂಚರಿಸಿದವು. ಆಟೊಗಳು ಬೀದಿಗಳಿದಿದ್ದವು. ಅಂಗಡಿ, ಮುಂಗಟ್ಟುಗಳು ತೆರೆದಿದ್ದವು.

ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಪ್ರದೀಪ್ ನೇತೃತ್ವದಲ್ಲಿ ಸಂಗೊಳ್ಳಿರಾಯಣ್ಣ ವೃತ್ತದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ಎಂಇಎಸ್ ವಿರುದ್ಧ ಘೊಷಣೆ ಕೂಗಲಾಯಿತು.
ಕೆಆರ್ಟಿಸಿ ಬಸ್ ನಿರ್ವಾಹಕರ ಮೇಲೆ ಹಲ್ಲೆ ಹಾಗೂ ಸುಳ್ಳು ಪೋಕ್ಸೋ ಪ್ರಕರಣ ದಾಖಲಿಸಿದ್ದನ್ನು ಖಂಡಿಸಿದ ಪ್ರತಿಭಟನಾಕಾರರು ಭಾಷಾ ಸಾಮರಸ್ಯ ಹಾಳು ಮಾಡುತ್ತಿರುವ ಎಂಇಎಸ್, ಶಿವಸೇನೆ ನಿಷೇಧಿಸಲು ಆಗ್ರಹಿಸಿ ತಹಸೀಲ್ದಾರ್ ಪಟ್ಟರಾಜಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು.
ಬೆಳಗಾವಿಯಲ್ಲಿ ಕನ್ನಡಿಗರು ಎಷ್ಟೇ ಅವಮಾನ ಅನುಭವಿಸುತ್ತಿದ್ದರೂ ಎಲ್ಲ ಪಕ್ಷದ ಜನಪ್ರತಿನಿಧಿಗಳು ಕನ್ನಡಿಗರಿಗೆ ಬೆಂಬಲ ವ್ಯಕ್ತಪಡಿಸದೆ ಮೌನವಾಗಿದ್ದಾರೆ. ಇದಕ್ಕೆ ಕಾರಣ ಮರಾಠಿಗರ ಮತ ಬ್ಯಾಂಕ್ ಎಂದು ಟೀಕಿಸಿದರು.
ಕನ್ನಡಿಗರ ಮೇಲೆ ದೌರ್ಜನ್ಯ ಎಸಗುವ, ಸಾರಿಗೆ ಬಸ್ಗಳಿಗೆ ಕಲ್ಲು ಎಸೆಯುವ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರನ್ನು ಬೆಳಗಾವಿಯಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿದರು.
ಸಂಘಟನೆ ಪ್ರಮುಖರಾದ ಅಣ್ಣಪ್ಪ, ಸೋಮೇಶ್ವರಯ್ಯ, ಸುಜಯ್, ಡಿ. ಮಧು, ಬಸವರಾಜ್, ಆಂಜನೇಯ, ಸುನಿಲ್, ಯಶ ವಂತ್, ಪ್ರಮೋದ್, ಅಭಿ, ಮಂಜು ಹಾಗೂ ಅನೇಕ ಕಾರ್ಯಕರ್ತರಿದ್ದರು.